<p><strong>ಅಹಮದಾಬಾದ್:</strong> ಕೊನೆಯ ಕ್ಷಣದವರೆಗೆ ತೆರೆಯ ಮರೆಯಲ್ಲಿ ನಡೆದ ಮನವೊಲಿಕೆ ಯತ್ನಗಳಿಗೆ ಮಣಿಯದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಮೊದಲೇ ಘೋಷಿಸಿದಂತೆ ಮಂಗಳವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಇಲ್ಲಿಯ ವಿಎಚ್ಪಿ ಕಚೇರಿ ಹೊರಗೆ ಸತ್ಯಾಗ್ರಹ ಕುಳಿತ ಅವರಿಗೆ ಹಲವು ಸಾಧು, ಸಂತರು ಮತ್ತು ಬೆಂಬಲಿಗರು ಸಾಥ್ ನೀಡಿದರು.</p>.<p>ಗೋಹತ್ಯೆ ನಿಷೇಧ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾನೂನು ರೂಪಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p><strong>ಮೋದಿ ವಿರುದ್ಧ ನಿಲ್ಲದ ವಾಗ್ದಾಳಿ:</strong><br /> ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಆರ್ಥಿಕ ನೀತಿಗಳನ್ನು ತೊಗಾಡಿಯಾ ಇದೇ ವೇಳೆ ತರಾಟೆಗೆ ತೆಗೆದುಕೊಂಡರು.</p>.<p>‘ಬಹುಮತ ದೊರೆತರೆ ಎಲ್ಲ ಸಮಸ್ಯೆಗಳಿಗೂ ಚಿಟಿಕೆ ಹೊಡೆಯುವಷ್ಟರಲ್ಲಿ ಪರಿಹಾರ ಕಂಡು ಹಿಡಿಯುವುದಾಗಿ ಮೋದಿ ಭರವಸೆ ನೀಡಿದ್ದರು. ನಿರೀಕ್ಷೆಯಂತೆ ಬಹುಮತ ದೊರೆಯಿತು. ಪ್ರಧಾನಿ ಸಮಸ್ಯೆ ಬಗೆಹರಿಸಬಹುದು ಎಂದು ನಾಲ್ಕು ವರ್ಷಗಳಿಂದ ಕಾಯುತ್ತಿದ್ದೇನೆ’ ಎಂದು ಅವರು ಲೇವಡಿ ಮಾಡಿದರು.</p>.<p><strong>ಸತ್ಯಾಗ್ರಹ ವಿಳಂಬ</strong><br /> ಸತ್ಯಾಗ್ರಹ ಕೈಬಿಡುವಂತೆ ತೊಗಾಡಿಯಾ ಮನವೊಲಿಸಲು ಆರ್ಎಸ್ಎಸ್ ಮತ್ತು ಬಿಜೆಪಿ ನಡೆಸಿದ ಹಲವು ಸುತ್ತಿನ ಕಸರತ್ತು ಫಲ ನೀಡಲಿಲ್ಲ. ಬಿಜೆಪಿಯ ನಾಯಕರು ಸೋಮವಾರದಿಂದಲೇ ತೊಗಾಡಿಯಾ ಬಳಿ ಮಾತುಕತೆ ಆರಂಭಿಸಿದ್ದರು.</p>.<p>ಆದರೆ, ಅವರು ಯಾವ ಒತ್ತಡಗಳಿಗೂ ಮಣಿಯದ ಕಾರಣ ಹಲವು ಸುತ್ತಿನ ಸಂಧಾನ ಮಾತುಕತೆಗಳು ವಿಫಲವಾದವು. ಸತ್ಯಾಗ್ರಹ ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾಯಿತು.</p>.<p>ಉಪವಾಸ ಸತ್ಯಾಗ್ರಹ ನಡೆಸಲು ತೊಗಾಡಿಯಾ ಅವರು ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ ಎಂಬ ಆರೋಪ ಕೇಳಿ ಬಂದಿದೆ.</p>.<p>**</p>.<p>ನೋಟು ರದ್ದತಿ ಮತ್ತು ಜಿಎಸ್ಟಿ ಜಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಈ ದೇಶದ ವರ್ತಕರ ಕತ್ತು ಮುರಿದರು<br /> <em><strong>– ಪ್ರವೀಣ್ ತೊಗಾಡಿಯಾ, ವಿಎಚ್ಪಿ ಮಾಜಿ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಕೊನೆಯ ಕ್ಷಣದವರೆಗೆ ತೆರೆಯ ಮರೆಯಲ್ಲಿ ನಡೆದ ಮನವೊಲಿಕೆ ಯತ್ನಗಳಿಗೆ ಮಣಿಯದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮಾಜಿ ಮುಖಂಡ ಪ್ರವೀಣ್ ತೊಗಾಡಿಯಾ ಮೊದಲೇ ಘೋಷಿಸಿದಂತೆ ಮಂಗಳವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಇಲ್ಲಿಯ ವಿಎಚ್ಪಿ ಕಚೇರಿ ಹೊರಗೆ ಸತ್ಯಾಗ್ರಹ ಕುಳಿತ ಅವರಿಗೆ ಹಲವು ಸಾಧು, ಸಂತರು ಮತ್ತು ಬೆಂಬಲಿಗರು ಸಾಥ್ ನೀಡಿದರು.</p>.<p>ಗೋಹತ್ಯೆ ನಿಷೇಧ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾನೂನು ರೂಪಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.</p>.<p><strong>ಮೋದಿ ವಿರುದ್ಧ ನಿಲ್ಲದ ವಾಗ್ದಾಳಿ:</strong><br /> ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಆರ್ಥಿಕ ನೀತಿಗಳನ್ನು ತೊಗಾಡಿಯಾ ಇದೇ ವೇಳೆ ತರಾಟೆಗೆ ತೆಗೆದುಕೊಂಡರು.</p>.<p>‘ಬಹುಮತ ದೊರೆತರೆ ಎಲ್ಲ ಸಮಸ್ಯೆಗಳಿಗೂ ಚಿಟಿಕೆ ಹೊಡೆಯುವಷ್ಟರಲ್ಲಿ ಪರಿಹಾರ ಕಂಡು ಹಿಡಿಯುವುದಾಗಿ ಮೋದಿ ಭರವಸೆ ನೀಡಿದ್ದರು. ನಿರೀಕ್ಷೆಯಂತೆ ಬಹುಮತ ದೊರೆಯಿತು. ಪ್ರಧಾನಿ ಸಮಸ್ಯೆ ಬಗೆಹರಿಸಬಹುದು ಎಂದು ನಾಲ್ಕು ವರ್ಷಗಳಿಂದ ಕಾಯುತ್ತಿದ್ದೇನೆ’ ಎಂದು ಅವರು ಲೇವಡಿ ಮಾಡಿದರು.</p>.<p><strong>ಸತ್ಯಾಗ್ರಹ ವಿಳಂಬ</strong><br /> ಸತ್ಯಾಗ್ರಹ ಕೈಬಿಡುವಂತೆ ತೊಗಾಡಿಯಾ ಮನವೊಲಿಸಲು ಆರ್ಎಸ್ಎಸ್ ಮತ್ತು ಬಿಜೆಪಿ ನಡೆಸಿದ ಹಲವು ಸುತ್ತಿನ ಕಸರತ್ತು ಫಲ ನೀಡಲಿಲ್ಲ. ಬಿಜೆಪಿಯ ನಾಯಕರು ಸೋಮವಾರದಿಂದಲೇ ತೊಗಾಡಿಯಾ ಬಳಿ ಮಾತುಕತೆ ಆರಂಭಿಸಿದ್ದರು.</p>.<p>ಆದರೆ, ಅವರು ಯಾವ ಒತ್ತಡಗಳಿಗೂ ಮಣಿಯದ ಕಾರಣ ಹಲವು ಸುತ್ತಿನ ಸಂಧಾನ ಮಾತುಕತೆಗಳು ವಿಫಲವಾದವು. ಸತ್ಯಾಗ್ರಹ ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾಯಿತು.</p>.<p>ಉಪವಾಸ ಸತ್ಯಾಗ್ರಹ ನಡೆಸಲು ತೊಗಾಡಿಯಾ ಅವರು ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ ಎಂಬ ಆರೋಪ ಕೇಳಿ ಬಂದಿದೆ.</p>.<p>**</p>.<p>ನೋಟು ರದ್ದತಿ ಮತ್ತು ಜಿಎಸ್ಟಿ ಜಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಈ ದೇಶದ ವರ್ತಕರ ಕತ್ತು ಮುರಿದರು<br /> <em><strong>– ಪ್ರವೀಣ್ ತೊಗಾಡಿಯಾ, ವಿಎಚ್ಪಿ ಮಾಜಿ ನಾಯಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>