<p><strong>ಹಾಸನ:</strong> ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ತೆರೆ ಬಿದ್ದಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಮಂಗಳವಾರ ಸಂಜೆ ಅಧಿಕಾರ ವಹಿಸಿಕೊಂಡರು.</p>.<p>ವರ್ಗಾವಣೆ ಆದೇಶ ಮಾನ್ಯ ಮಾಡಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಹೊರಡಿಸುತ್ತಿದ್ದಂತೆ ಅಧಿಕಾರ ಸ್ವೀಕರಿಸಿದರು.</p>.<p>ಎರಡು ತಿಂಗಳ ಹಿಂದೆಯೇ ರಂದೀಪ್ ಅವರನ್ನು ಹಾಸನಕ್ಕೆ ವರ್ಗ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ದಾಸರಿ ಸಿಎಟಿ ಮತ್ತು ಹೈಕೋರ್ಟ್ ಮೆಟ್ಟಿಲೇರಿದ ಕಾರಣ ಅಧಿಕಾರ ಸ್ವೀಕಾರಕ್ಕೆ ಅಡ್ಡಿಯಾಗಿತ್ತು.</p>.<p>ರಾಜ್ಯ ಸರ್ಕಾರ ಅವಧಿಗೂ ಮುನ್ನವೇ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ, ಮಾರ್ಚ್ 8ರಂದು ಸಿಎಟಿ ಮೊರೆ ಹೋಗಿದ್ದರು. ಈ ಸಂಬಂಧ ವಾದ, ಪ್ರತಿವಾದ ಆಲಿಸಿ, 21ರಂದು ತೀರ್ಪು ನೀಡಿತ್ತು. ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಪರ ವಕೀಲರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಸಿಎಟಿಯಲ್ಲೇ ಪರಿಹರಿಸಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>2017ರ ಜುಲೈ 14ರಂದು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಜ. 22ರಂದು ಸರ್ಕಾರ ವರ್ಗಾವಣೆ ಮಾಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವರ್ಗಾವಣೆಯನ್ನು ತಡೆ ಹಿಡಿದಿತ್ತು.</p>.<p>ಮಾರ್ಚ್ 5ರಂದು ವರ್ಗಾವಣೆ ಆದೇಶವನ್ನು ಸರ್ಕಾರ ವಾಪಸ್ ಪಡೆದಿತ್ತು. ಮಾರ್ಚ್ 6ರಂದು ಮತ್ತೆ ವರ್ಗಾವಣೆ ಮಾಡಿ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ತೆರೆ ಬಿದ್ದಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಮಂಗಳವಾರ ಸಂಜೆ ಅಧಿಕಾರ ವಹಿಸಿಕೊಂಡರು.</p>.<p>ವರ್ಗಾವಣೆ ಆದೇಶ ಮಾನ್ಯ ಮಾಡಿ ಕೇಂದ್ರ ಆಡಳಿತ ನ್ಯಾಯ ಮಂಡಳಿ (ಸಿಎಟಿ) ಆದೇಶ ಹೊರಡಿಸುತ್ತಿದ್ದಂತೆ ಅಧಿಕಾರ ಸ್ವೀಕರಿಸಿದರು.</p>.<p>ಎರಡು ತಿಂಗಳ ಹಿಂದೆಯೇ ರಂದೀಪ್ ಅವರನ್ನು ಹಾಸನಕ್ಕೆ ವರ್ಗ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ದಾಸರಿ ಸಿಎಟಿ ಮತ್ತು ಹೈಕೋರ್ಟ್ ಮೆಟ್ಟಿಲೇರಿದ ಕಾರಣ ಅಧಿಕಾರ ಸ್ವೀಕಾರಕ್ಕೆ ಅಡ್ಡಿಯಾಗಿತ್ತು.</p>.<p>ರಾಜ್ಯ ಸರ್ಕಾರ ಅವಧಿಗೂ ಮುನ್ನವೇ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ, ಮಾರ್ಚ್ 8ರಂದು ಸಿಎಟಿ ಮೊರೆ ಹೋಗಿದ್ದರು. ಈ ಸಂಬಂಧ ವಾದ, ಪ್ರತಿವಾದ ಆಲಿಸಿ, 21ರಂದು ತೀರ್ಪು ನೀಡಿತ್ತು. ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಪರ ವಕೀಲರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಸಿಎಟಿಯಲ್ಲೇ ಪರಿಹರಿಸಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>2017ರ ಜುಲೈ 14ರಂದು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಜ. 22ರಂದು ಸರ್ಕಾರ ವರ್ಗಾವಣೆ ಮಾಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವರ್ಗಾವಣೆಯನ್ನು ತಡೆ ಹಿಡಿದಿತ್ತು.</p>.<p>ಮಾರ್ಚ್ 5ರಂದು ವರ್ಗಾವಣೆ ಆದೇಶವನ್ನು ಸರ್ಕಾರ ವಾಪಸ್ ಪಡೆದಿತ್ತು. ಮಾರ್ಚ್ 6ರಂದು ಮತ್ತೆ ವರ್ಗಾವಣೆ ಮಾಡಿ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>