ಈ ಬಗ್ಗೆ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ‘ಭಗವಾನ್ ಬಸವೇಶ್ವರರಿಗೆ ಅವರ ಜಯಂತಿಯಂದು ನಾನು ತಲೆ ಬಾಗುತ್ತೇನೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಅವರು ಕೇಂದ್ರಸ್ಥಾನ ಅಲಂಕರಿಸುತ್ತಾರೆ. ಸಾಮಾಜಿಕ ಸೌಹಾರ್ದತೆ, ಸಹೋದರತ್ವ, ಏಕತೆ ಮತ್ತು ಸಹಾನುಭೂತಿಗೆ ಅವರು ನೀಡಿದ ಪ್ರಾಮುಖ್ಯತೆ, ನಮಗೆ ಸದಾ ಪ್ರೇರಣೆ ಎಂದು ಹೇಳಿದ್ದಾರೆ.