ಆ ನಂತರ ಲಕ್ಷ್ಮೀ ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಮತದಾನ ಪ್ರತಿಜ್ಞಾ ವಿಧಿ ಭೋಧಿಸಿದರು. ಈ ಬಾರಿ ಚುನಾವಣಾ ಆಯೋಗವು ನೈತಿಕ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಪ್ರತಿಯೊಬ್ಬ ಮತದಾರರು ಯಾವುದೇ ಆಸೆ, ಆಮಿಷ, ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ ವಿವೇಚನೆ ಬಳಸಿ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಿ ಎಂದು ಅವರು ಕರೆ ನೀಡಿದರು.