ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಮತಿನಾಥ ಜೈನ ಬಸದಿ ರಜತ ಮಹೋತ್ಸವ

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಹಳೇನಗರದ ಸುಮತಿನಾಥ ಜೈನ್ ಬಸದಿಯ ರಜತ ಮಹೋತ್ಸವ ಸಮಾರಂಭ ನಡೆಯಿತು.

ದೇವರ ನಾಮಗಳ ಭಜನೆ, ಧ್ಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಕರು ಜನ್ಮರಥ ಕಲ್ಯಾಣ ಉತ್ಸವದಲ್ಲಿ ಪುಷ್ಪಾರ್ಚನೆ ಸಮರ್ಪಿಸಿದರು.

ಸುಮತಿನಾಥ್ ಭಗವಾನ್ ದೇವರನ್ನು ಬೆಳ್ಳಿರಥದಲ್ಲಿ ಕೂರಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ದೇವಾಲಯದ ಟ್ರಸ್ಟಿ ಪ್ರಕಾಶ್ಚಂದ್ರ ಜೈನ್ ಕೊಠಾರಿ, ‘ಜೈನ ಸಮುದಾಯದ ಕುಟುಂಬ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವುದು ಮಾನಸಿಕ ನೆಮ್ಮದಿ ಹಾಗೂ ಖುಷಿತಂದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT