ಬೀದರ್: ‘ದುಷ್ಟ ಪ್ರವೃತ್ತಿಯ ರಾಜಕೀಯ ಪಕ್ಷಗಳು ಹಾಗೂ ಭ್ರಷ್ಟ ಅಭ್ಯರ್ಥಿಗಳನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಜನಾಂದೋಲನಗಳ ಮಹಾಮೈತ್ರಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 21 ಅಭ್ಯರ್ಥಿಗಳನ್ನು ಕಣಕ್ಕಿ ಳಿಸಿದೆ’ ಎಂದು ಮಹಾಮೈತ್ರಿ ಮುಖಂಡ ಎಸ್.ಆರ್. ಹಿರೇಮಠ ಹೇಳಿದರು.
‘ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ಗೆ ಪರ್ಯಾಯವಾದ ಅಭ್ಯರ್ಥಿ ಗಳನ್ನು ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಒಮ್ಮತ ಸಾಧ್ಯವಾದ ಮೂವರು ಅಭ್ಯರ್ಥಿಗಳಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ’ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
**
ಪ್ರಜ್ಞಾವಂತ ಮತದಾರರು ಮತಾಂಧತೆ ಹಾಗೂ ಭ್ರಷ್ಟಾಚಾರಕ್ಕೆ ಒಳಗಾಗದೆ ಜಾಗರೂಕತೆಯಿಂದ ಮತ ಹಕ್ಕು ಚಲಾಯಿಸಿ ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು. -ರಾಘವೇಂದ್ರ ಕುಷ್ಟಗಿ, ಜನಾಂದೋಲನಗಳ ಮಹಾಮೈತ್ರಿ ಮುಖಂಡ