ಅಭಯಚಂದ್ರ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಮೂಡುಬಿದಿರೆ ಸ್ವರ್ಣ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧನಂಜಯ ಮಟ್ಟು, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಮತ್ತು ಕಾಂಗ್ರೆಸ್ ಮುಖಂಡ ರತ್ನಾಕರ ಸಿ. ಮೊಯಿಲಿ ನಾಮಪತ್ರ ಸಲ್ಲಿಸುವಾಗ ಜೊತೆಗಿದ್ದರು.