ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಲು ಹೋದ ಮೂವರು ಬಾಲಕರು ನೀರು ಪಾಲು

Last Updated 19 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಿರಿಗೆರೆಮಠದ ಶಾಂತಿವನ ಕಿರು ಜಲಾಶಯಕ್ಕೆ ಈಜಲು ತೆರಳಿದ್ದ ಮೂವರು ಬಾಲಕರು ಸಾವನ್ನಪ್ಪಿದ್ದಾರೆ.

ಮೃತರನ್ನು ಆಕಾಶ್ (14) ಶಿವರಾಜ್ (13), ದರ್ಶನ್ (12) ಎಂದು ಗುರುತಿಸಲಾಗಿದೆ. ಈ ಮೂವರು ದಾವಣಗೆರೆ ಜಿಲ್ಲೆ ಹುಚ್ಚವ್ವನಹಳ್ಳಿ, ಚಿತ್ರದುರ್ಗದ ದಂಡಿಗೇನಹಳ್ಳಿ ಹಾಗೂ ಮುತ್ತುಗದೂರಿನವರು.

ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಮಠಕ್ಕೆ ಬಂದಿದ್ದ ಬಾಲಕರಲ್ಲಿ 8 ಜನರು ಕಿರುಜಲಾಶಯಕ್ಕೆ ತೆರಳಿದ್ದರು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ನೀರಿನಿಂದ ಹೊರಗೆ ತೆಗೆಯಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT