ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೈಸೂರಿನಲ್ಲಿ ಸ್ಮಾರಕ ನಿರ್ಮಿಸುವ ಕೆಲಸ ಕೂಡ ಇನ್ನೂ ಪೂರ್ಣಗೊಂಡಿಲ್ಲ. ಆ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಭಾರತಿ ವಿಷ್ಣುವರ್ಧನ್ ಅವರನ್ನು ಕೇಳಿದಾಗ ‘ಇದರಲ್ಲಿ ನೀವು ಮೂಗು ತೂರಿಸಬೇಡಿ’ ಎಂದು ಹೇಳಿದ್ದಾರೆ. ಅವರ ಮೃದು ಧೋರಣೆಯಿಂದಾಗಿಯೇ ಸ್ಮಾರಕ ವಿಳಂಬವಾಗಿದೆ. ಈಗ ಸಮಾಧಿ ಜಾಗ ಕೂಡ ನಮ್ಮ ಕೈಬಿಟ್ಟು ಹೋಗುತ್ತಿದೆ’ ಎಂದು ಆರೋಪಿಸಿದರು.