ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಕೇಂದ್ರ ವೀಕ್ಷಕರ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು.ನಿಯೋಜನೆಗೊಂಡ ವೆಚ್ಚ ವೀಕ್ಷಕರು ಮಂಗಳವಾರದಿಂದಲೇ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಸಿದ್ಧತೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಹಾನಗಲ್ ಮತ್ತು ಬ್ಯಾಡಗಿ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಹಿರಿಯ ಐ.ಎ.ಎಸ್. ಅಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಮಿಶ್ರಾ, ಶಿಗ್ಗಾವಿ ಮತ್ತು ಹಾವೇರಿ ಕ್ಷೇತ್ರಕ್ಕೆ ಡಾ.ಸಮೀತ್ ಶರ್ಮಾ, ಹಿರೇಕೆರೂರ ಕ್ಷೇತ್ರಕ್ಕೆ ಜಯಕುಮಾರ ವಿ., ರಾಣೆಬೆನ್ನೂರು ಕ್ಷೇತ್ರಕ್ಕೆ ಮೋಹಿಂದ್ರಪಾಲ್ ಹಾಗೂ ಪೊಲೀಸ್ ವೀಕ್ಷಕರಾಗಿ ಜಿಲ್ಲೆಗೆ ಎಸ್.ಕೆ.ನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.