ಅದೇ ಕಾರಣಕ್ಕೆ ಯಶ್ಪಾಲ್ ಸುವರ್ಣ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನಾ ಗಣೇಶ್ ಅವರ ಹೆಸರು ಉಡುಪಿ ಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಇವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಿ, ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟರನ್ನು ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ಇದೆ ಎನ್ನಲಾಗಿದೆ. ಯಶ್ಪಾಲ್ ಹಾಗೂ ಮಾಜಿ ಶಾಸಕ ಲಾಲಾಜಿ ಮೆಂಡನ್ ಅವರು ಕಾಪು ಕ್ಷೇತ್ರದ ಆಕಾಂಕ್ಷಿಗಳಾಗಿದ್ದಾರೆ.