ಈ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿರುವ ಸತೀಶ್ ರೆಡ್ಡಿ, ಹ್ಯಾಟ್ರಿಕ್ ಜಯಕ್ಕೆ ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ನ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಶಿಷ್ಯೆ ಸುಷ್ಮಾ ರಾಜಗೋಪಾಲರೆಡ್ಡಿ ಅವರನ್ನು ಈ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ನಿಲ್ಲಿಸಿದ್ದಾರೆ. ಈಗ ಜೆಡಿಎಸ್ ಪರವಾಗಿ ಸ್ವಾಮೀಜಿ ರಂಗ ಪ್ರವೇಶಿಸಿದರೆ, ಕ್ಷೇತ್ರದ ಕದನ ಕುತೂಹಲ ಹೆಚ್ಚಲಿದೆ.