ಕೃಷಿ ಆಧಾರಿತ ಕರ್ನಾಟಕದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರವೇ ಕಾರಣ. ಇಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್ಸಿಗರು ಹತ್ಯೆಗೆ ಉದಾಹರಣೆ ನೀಡಲು ಉತ್ತರ ಪ್ರದೇಶದ ಹೆಸರು ಬಳಸುತ್ತಾರೆ. ಅಲ್ಲಿ ಹಿಂದೂಗಳ ಹತ್ಯೆಯೂ ಆಗಿಲ್ಲ, ರೈತರ ಆತ್ಮಹತ್ಯೆಯೂ ನಡೆದಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯೂ ಅಲ್ಲಿ ಇಲ್ಲ. ಆದರೆ, ಇಲ್ಲಿ ಪರಿಸ್ಥಿತಿ ತಲೆಕೆಳಗಾಗಿದೆ ಎಂದು ಟೀಕಿಸಿದರು.