ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಅವರು ಪತ್ರಕರ್ತರ ಜೊತೆ ಮಾತನಾಡಿ ‘ಭಾರತದ ವೇಗದ ಬೌಲರ್ಗಳಲ್ಲಿ ಜಸ್ಪ್ರೀತ್ ಬೂಮ್ರಾ ಮತ್ತು ಭುವನೇಶ್ವರ್ ಕುಮಾರ್ ಪ್ರಮುಖರು. ಭುವನೇಶ್ವರ್ ಕುಮಾರ್ ಐಪಿಎಲ್ನಲ್ಲಿ ಸನ್ರೈಸರ್ಸ್ ತಂಡದ ಮುಖ್ಯ ಅಸ್ತ್ರ. ಕಳೆದ ಮೂರು ಪಂದ್ಯಗಳಲ್ಲಿ ಅವರು ಆಡಿಲ್ಲ. ಆದರೂ ತಂಡ ಬೌಲಿಂಗ್ ದಾಳಿಯಲ್ಲಿ ಸ್ಥಿರತೆಯನ್ನು ಕಾಯ್ದುಕೊಂಡಿರುವುದು ಗಮನಾರ್ಹ’ ಎಂದು ಹೇಳಿದರು.