ಆದರೆ, ಚಿಕಾಗೊದಲ್ಲಿ ನೆಲೆಸಿರುವ ಕಮಲ್ ಲೋಚನ್ ಮಹಾಂತ್ ಎಂಬುವರು ಇದೇ ವಿಡಿಯೊ ಅನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ರಕ್ತಪಾತ ಆಗಲಿದೆ ಎಂದು ಜಮೀರ್ ಶಪಥ ಮಾಡಿದ್ದಾರೆ. ಆತ್ಮೀಯ ಕನ್ನಡಿಗರೇ ನೀವು ತೊಂದರೆಗೆ ಸಿಕ್ಕಿಹಾಕಿಕೊಳ್ಳುವ ಮೊದಲು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ’ ಎಂದು ಒಕ್ಕಣಿಕೆ ಬರೆದಿದ್ದಾರೆ.