ತೀರ್ಪಿನ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಜೀವ ಹಾನಿ ಆಗಿದೆ. ಅಲ್ಲದೆ, ಸಂಸತ್ತು ರೂಪಿಸಿದ ಕಾಯ್ದೆಗೆ ವ್ಯತಿರಿಕ್ತ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಹಾಗಾಗಿ ಈ ತೀರ್ಪನ್ನು ಅಮಾನತಿನಲ್ಲಿ ಇರಿಸಬೇಕು. ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಹಿಸಬೇಕು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ವಾದಿಸಿದರು.