ಬಳ್ಳಾರಿಗೆ ತೆರಳಲು ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್; ಜನಾರ್ದನ ರೆಡ್ಡಿ ಆಸೆಗೆ ತಣ್ಣೀರು

ನವದೆಹಲಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜನಾರ್ದನ ರೆಡ್ಡಿ ಮೇ 8, 9ರಂದು ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಶುಕ್ರವಾರ ಕೋರ್ಟ್ ಅರ್ಜಿ ವಿಚಾರಣೆ ನಡೆಸಿತು.
ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜರ್ನಾದನ ರೆಡ್ಡಿ ಅವರು ಚುನಾವಣೆಗಾಗಿ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿದೆ.
ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸಂಬಂಧಿಸಿ ಮಗಳ ಮದುವೆ ಸೇರಿದಂತೆ ಹಲವು ಬಾರಿ ಸುಪ್ರೀಂ ಕೊರ್ಟ್ ಅನುಮತಿ ನೀಡಿತ್ತು. ಆದರೆ, ಈ ಬಾರಿ ಬಳ್ಳಾರಿಗೆ ತೆರಳಲು ಅನುಮತಿ ನೀಡಿಲ್ಲ. ಹಾಗಾಗಿ, ರೆಡ್ಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಿಲ್ಲ.
ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ 2011 ಹಾಗೂ 2015ರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆ ಎದುರಿಸಿದ್ದಾರೆ. 2015ರಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.
ಇನ್ನಷ್ಟು...
* ಬಿಜೆಪಿಗೆ ಜನಾರ್ದನ ರೆಡ್ಡಿ ಸೇವೆ ಬೇಕಿದೆ
* ಜನಾರ್ದನ ರೆಡ್ಡಿ ವೇದಿಕೆ ದೃಶ್ಯ ವಾಟ್ಸ್ಆ್ಯಪ್ ಮಾಡಿ: ಮುರಳೀಧರ್ ರಾವ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.