<p><strong>ನವದೆಹಲಿ: </strong>ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಜನಾರ್ದನ ರೆಡ್ಡಿ ಮೇ 8, 9ರಂದು ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಶುಕ್ರವಾರ ಕೋರ್ಟ್ ಅರ್ಜಿ ವಿಚಾರಣೆ ನಡೆಸಿತು.</p>.<p>ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜರ್ನಾದನ ರೆಡ್ಡಿ ಅವರು ಚುನಾವಣೆಗಾಗಿ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿದೆ.</p>.<p>ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸಂಬಂಧಿಸಿ ಮಗಳ ಮದುವೆ ಸೇರಿದಂತೆ ಹಲವು ಬಾರಿ ಸುಪ್ರೀಂ ಕೊರ್ಟ್ ಅನುಮತಿ ನೀಡಿತ್ತು. ಆದರೆ, ಈ ಬಾರಿ ಬಳ್ಳಾರಿಗೆ ತೆರಳಲು ಅನುಮತಿ ನೀಡಿಲ್ಲ. ಹಾಗಾಗಿ, ರೆಡ್ಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಿಲ್ಲ.</p>.<p>ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ 2011 ಹಾಗೂ 2015ರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆ ಎದುರಿಸಿದ್ದಾರೆ. 2015ರಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.</p>.<p><strong>ಇನ್ನಷ್ಟು... </strong></p>.<p><strong>* <a href="http://www.prajavani.net/news/article/2018/05/03/570382.html" target="_blank">ಬಿಜೆಪಿಗೆ ಜನಾರ್ದನ ರೆಡ್ಡಿ ಸೇವೆ ಬೇಕಿದೆ</a></strong></p>.<p>* <a href="http://www.prajavani.net/news/article/2018/05/02/570275.html" target="_blank"><strong>ಜನಾರ್ದನ ರೆಡ್ಡಿ ವೇದಿಕೆ ದೃಶ್ಯ ವಾಟ್ಸ್ಆ್ಯಪ್ ಮಾಡಿ: ಮುರಳೀಧರ್ ರಾವ್</strong></a></p>.<p><strong>* <a href="http://www.prajavani.net/news/article/2018/05/04/570624.html" target="_blank">ಟಗರು ಗುದ್ದಿದ ರಭಸಕ್ಕೆ ರೆಡ್ಡಿ ಬೆನ್ನಾಗ್ ನೋವು ಹೋಗಿಲ್ಲ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಅಂಗವಾಗಿ ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಜನಾರ್ದನ ರೆಡ್ಡಿ ಮೇ 8, 9ರಂದು ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಶುಕ್ರವಾರ ಕೋರ್ಟ್ ಅರ್ಜಿ ವಿಚಾರಣೆ ನಡೆಸಿತು.</p>.<p>ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜರ್ನಾದನ ರೆಡ್ಡಿ ಅವರು ಚುನಾವಣೆಗಾಗಿ ಬಳ್ಳಾರಿಗೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿದೆ.</p>.<p>ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಸಂಬಂಧಿಸಿ ಮಗಳ ಮದುವೆ ಸೇರಿದಂತೆ ಹಲವು ಬಾರಿ ಸುಪ್ರೀಂ ಕೊರ್ಟ್ ಅನುಮತಿ ನೀಡಿತ್ತು. ಆದರೆ, ಈ ಬಾರಿ ಬಳ್ಳಾರಿಗೆ ತೆರಳಲು ಅನುಮತಿ ನೀಡಿಲ್ಲ. ಹಾಗಾಗಿ, ರೆಡ್ಡಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಿಲ್ಲ.</p>.<p>ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ 2011 ಹಾಗೂ 2015ರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆ ಎದುರಿಸಿದ್ದಾರೆ. 2015ರಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.</p>.<p><strong>ಇನ್ನಷ್ಟು... </strong></p>.<p><strong>* <a href="http://www.prajavani.net/news/article/2018/05/03/570382.html" target="_blank">ಬಿಜೆಪಿಗೆ ಜನಾರ್ದನ ರೆಡ್ಡಿ ಸೇವೆ ಬೇಕಿದೆ</a></strong></p>.<p>* <a href="http://www.prajavani.net/news/article/2018/05/02/570275.html" target="_blank"><strong>ಜನಾರ್ದನ ರೆಡ್ಡಿ ವೇದಿಕೆ ದೃಶ್ಯ ವಾಟ್ಸ್ಆ್ಯಪ್ ಮಾಡಿ: ಮುರಳೀಧರ್ ರಾವ್</strong></a></p>.<p><strong>* <a href="http://www.prajavani.net/news/article/2018/05/04/570624.html" target="_blank">ಟಗರು ಗುದ್ದಿದ ರಭಸಕ್ಕೆ ರೆಡ್ಡಿ ಬೆನ್ನಾಗ್ ನೋವು ಹೋಗಿಲ್ಲ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>