ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಾಖಲೆ ಇಲ್ಲದ ₹ 50 ಲಕ್ಷ ಹಣ ವಶ

Last Updated 4 ಮೇ 2018, 11:09 IST
ಅಕ್ಷರ ಗಾತ್ರ

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 50 ಲಕ್ಷ ಹಣವನ್ನು ಹುಣಸೂರಿನ ಚುನಾವಣಾಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಳಿಕೆರೆ ಸಮೀಪದ ಮನುಗನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಬಸ್ಸು ಮೈಸೂರಿನಿಂದ ಉಡುಪಿಗೆ ತೆರಳುತ್ತಿತ್ತು.

₹2000 ಮತ್ತು ₹ 500 ಮುಖಬೆಲೆಯ ನೋಟುಗಳ ಕಂತೆಗಳನ್ನು ರಟ್ಟಿನ ಪೆಟ್ಟಿಗೆಯಲ್ಲಿ ತುಂಬಿಡಲಾಗಿತ್ತು ಎಂದು ಹುಣಸೂರು ಚುನಾವಣಾಧಿಕಾರಿ ನಿತೀಶ್‌ ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT