<p><strong>ಬೆಂಗಳೂರು: </strong>ಪಿಯು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವುದು ತಡವಾಗುವುದರಿಂದ ಜೂನ್ವರೆಗೂ ಉಚಿತ ಪ್ರಯಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುವು ಮಾಡಿಕೊಟ್ಟಿದೆ.</p>.<p>2017–18ನೇ ಸಾಲಿನಲ್ಲಿ ಪ್ರಥಮ ಪಿಯುಸಿ ವೇಳೆ ಪಾಸ್ ಪಡೆದಿರುವ ವಿದ್ಯಾರ್ಥಿಗಳು, ಈ ಸಾಲಿನ ಪಾಸ್ ವಿತರಿಸುವವರೆಗೂ ಹಳೆಯ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ಪ್ರತಿ ವರ್ಷ ಜೂನ್ ತಿಂಗಳಲ್ಲಿ ನೂತನ ಶೈಕ್ಷಣಿಕ ವರ್ಷದ ಬಸ್ ಪಾಸ್ ವಿತರಿಸುತ್ತೇವೆ. ಆದರೆ, ಈ ಬಾರಿ ದ್ವಿತೀಯ ಪಿಯು ತರಗತಿಗಳು ಮುಂಚಿತವಾಗಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ’ ಎಂದಿದೆ.</p>.<p><strong>ಸಮಯ ಬದಲು: </strong>ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಮೇ ತಿಂಗಳಲ್ಲಿ ಕಾಲೇಜಿನ ವೇಳೆಯನ್ನು ಬೆಳಿಗ್ಗೆ 8 ರಿಂದ 11ರವರೆಗೆ ಬದಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಿಯು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವುದು ತಡವಾಗುವುದರಿಂದ ಜೂನ್ವರೆಗೂ ಉಚಿತ ಪ್ರಯಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುವು ಮಾಡಿಕೊಟ್ಟಿದೆ.</p>.<p>2017–18ನೇ ಸಾಲಿನಲ್ಲಿ ಪ್ರಥಮ ಪಿಯುಸಿ ವೇಳೆ ಪಾಸ್ ಪಡೆದಿರುವ ವಿದ್ಯಾರ್ಥಿಗಳು, ಈ ಸಾಲಿನ ಪಾಸ್ ವಿತರಿಸುವವರೆಗೂ ಹಳೆಯ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>‘ಪ್ರತಿ ವರ್ಷ ಜೂನ್ ತಿಂಗಳಲ್ಲಿ ನೂತನ ಶೈಕ್ಷಣಿಕ ವರ್ಷದ ಬಸ್ ಪಾಸ್ ವಿತರಿಸುತ್ತೇವೆ. ಆದರೆ, ಈ ಬಾರಿ ದ್ವಿತೀಯ ಪಿಯು ತರಗತಿಗಳು ಮುಂಚಿತವಾಗಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ’ ಎಂದಿದೆ.</p>.<p><strong>ಸಮಯ ಬದಲು: </strong>ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಮೇ ತಿಂಗಳಲ್ಲಿ ಕಾಲೇಜಿನ ವೇಳೆಯನ್ನು ಬೆಳಿಗ್ಗೆ 8 ರಿಂದ 11ರವರೆಗೆ ಬದಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>