ಏಕಸದಸ್ಯ ಪೀಠದ ತೀರ್ಪು ರದ್ದು ಪಡಿಸುವಂತೆ ಕೋರಿ ವಿಧಾನಸಭಾಧ್ಯಕ್ಷರ ಕಚೇರಿ ಕಾರ್ಯದರ್ಶಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜೆಡಿಎಸ್ನ ಬಂಡಾಯ ಶಾಸಕರು ಸಲ್ಲಿಸಿರುವ ಈ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಆಲಿಸಿದ್ದು ತೀರ್ಪು ಕಾಯ್ದಿರಿಸಿದೆ.