<p><strong>ಬೆಂಗಳೂರು:</strong> ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಎಂ.ಸತೀಶ್ ರೆಡ್ಡಿ ಪರ ನಟ ಯಶ್ ಶುಕ್ರವಾರ ಮಾತ ಯಾಚಿಸಿದರು.</p>.<p>ತೆರೆದ ವಾಹನದಲ್ಲಿ ರೋಡ್ ಷೋ ನಡೆಸಿದ ಅವರನ್ನು ನೋಡಲು ಭಾರಿ ಸಂಖ್ಯೆಯ ಜನಸ್ತೋಮ ಸೇರಿತ್ತು. ಬೊಮ್ಮನಹಳ್ಳಿ ಹೆಬ್ಬಾಗಿಲಲ್ಲಿರುವ ವಿವೇಕಾನಂದ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಯಶ್ ಜನರತ್ತ ಕೈಬೀಸಿ ಧನ್ಯವಾದ ಅರ್ಪಿಸಿದರು.</p>.<p>‘ಪಕ್ಷದ ಪರವಾಗಿ ಮತಯಾಚಿಸಲು ನಾನು ಬಂದಿಲ್ಲ. ಸತೀಶ್ ರೆಡ್ಡಿ ನನ್ನ ಆತ್ಮೀಯರು, ಕ್ಷೇತ್ರದಲ್ಲಿ ಅವರು ಮಾಡಿರುವ ಜನಪರ ಕೆಲಸಗಳನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣದಿಂದ ಅವರ ಪರ ಪ್ರಚಾರಕ್ಕೆ ಬಂದಿದ್ದೇನೆ’ ಎಂದು ಯಶ್ ಸ್ಪಷ್ಟಪಡಿಸಿದರು.</p>.<p>‘ಈ ಭಾಗದಲ್ಲಿ ನೆರೆ ಬಂದ ವೇಳೆ ಸತೀಶ್ ರೆಡ್ಡಿ ಜನರೊಂದಿಗೆ ನಿಂತು ಅವರ ಕಷ್ಟಗಳಿಗೆ ಸ್ಪಂದಿಸಿದ ರೀತಿಯ ಬಗ್ಗೆ ಅಭಿಮಾನವಿದೆ. ರಾಜಕೀಯದಲ್ಲಿ ತೊಡಗಿಕೊಳ್ಳುತ್ತಿರುವ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ನನ್ನ ಈ ನಡೆಯ ಬಗ್ಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ. ಚುನಾವಣೆಗಾಗಿ ಸತೀಶ್ ಜೊತೆ ಇದ್ದೇನೆ. ಆದರೆ, ಜನರಿಗೆ ಅನ್ಯಾಯವಾದಾಗ ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಎಂ.ಸತೀಶ್ ರೆಡ್ಡಿ ಪರ ನಟ ಯಶ್ ಶುಕ್ರವಾರ ಮಾತ ಯಾಚಿಸಿದರು.</p>.<p>ತೆರೆದ ವಾಹನದಲ್ಲಿ ರೋಡ್ ಷೋ ನಡೆಸಿದ ಅವರನ್ನು ನೋಡಲು ಭಾರಿ ಸಂಖ್ಯೆಯ ಜನಸ್ತೋಮ ಸೇರಿತ್ತು. ಬೊಮ್ಮನಹಳ್ಳಿ ಹೆಬ್ಬಾಗಿಲಲ್ಲಿರುವ ವಿವೇಕಾನಂದ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಯಶ್ ಜನರತ್ತ ಕೈಬೀಸಿ ಧನ್ಯವಾದ ಅರ್ಪಿಸಿದರು.</p>.<p>‘ಪಕ್ಷದ ಪರವಾಗಿ ಮತಯಾಚಿಸಲು ನಾನು ಬಂದಿಲ್ಲ. ಸತೀಶ್ ರೆಡ್ಡಿ ನನ್ನ ಆತ್ಮೀಯರು, ಕ್ಷೇತ್ರದಲ್ಲಿ ಅವರು ಮಾಡಿರುವ ಜನಪರ ಕೆಲಸಗಳನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣದಿಂದ ಅವರ ಪರ ಪ್ರಚಾರಕ್ಕೆ ಬಂದಿದ್ದೇನೆ’ ಎಂದು ಯಶ್ ಸ್ಪಷ್ಟಪಡಿಸಿದರು.</p>.<p>‘ಈ ಭಾಗದಲ್ಲಿ ನೆರೆ ಬಂದ ವೇಳೆ ಸತೀಶ್ ರೆಡ್ಡಿ ಜನರೊಂದಿಗೆ ನಿಂತು ಅವರ ಕಷ್ಟಗಳಿಗೆ ಸ್ಪಂದಿಸಿದ ರೀತಿಯ ಬಗ್ಗೆ ಅಭಿಮಾನವಿದೆ. ರಾಜಕೀಯದಲ್ಲಿ ತೊಡಗಿಕೊಳ್ಳುತ್ತಿರುವ ಬಗ್ಗೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ನನ್ನ ಈ ನಡೆಯ ಬಗ್ಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ. ಚುನಾವಣೆಗಾಗಿ ಸತೀಶ್ ಜೊತೆ ಇದ್ದೇನೆ. ಆದರೆ, ಜನರಿಗೆ ಅನ್ಯಾಯವಾದಾಗ ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>