ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕುಮಾರ ಜಹಗೀರ್ದಾರ್ ಮಾತನಾಡಿ, ‘ಮಕ್ಕಳ ಮೇಲಿನ ದೌರ್ಜನ್ಯ, ಮಾನಸಿಕ ಒತ್ತಡ, ಅರ್ಧದಲ್ಲಿಯೇ ಶಾಲೆ ಬಿಡುವ ಪ್ರಕರಣಗಳು ಹೆಚ್ಚುತ್ತಿವೆ. ಆದರೂ ಯಾವುದೇ ಪಕ್ಷಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ರಾಜ್ಯದ ಪ್ರಮುಖ ಪಕ್ಷಗಳ ಪ್ರಣಾಳಿಕೆಯಲ್ಲಿಯೂ ಮಕ್ಕಳ ಹಿತ ಕಾಯುವ ಅಂಶಗಳು ಇಲ್ಲ’ ಎಂದು ಆರೋಪಿಸಿದರು.