ಡಿ.ಎ.ಗೋಪಾಲ್ ಮಾತನಾಡಿ, ‘ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ನೇರ ಕಾರಣ. ಕೆ.ಆರ್.ಪುರ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಕಾರ್ಯಕರ್ತರ ಅಟ್ಟಹಾಸ ಮುಂದುವರೆದಿದೆ. ಪಾಲಿಕೆಯ ಕಾಂಗ್ರೆಸ್ ಸದಸ್ಯರು ಮತ್ತು ಕಾರ್ಯಕರ್ತರು ನಿರಂತರ ಬೆದರಿಕೆ, ದಬ್ಬಾಳಿಕೆ ಹಾಕಿ ನಮ್ಮ ಮೇಲೆ ಪುಂಡಾಟಿಕೆ ಮೆರೆಯುತ್ತಿದ್ದಾರೆ’ ಎಂದು ಅವರು ದೂರಿದರು.