ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಭದ್ರತಾ ಪಡೆಗಳಿಂದ ಉಗ್ರನ ಹತ್ಯೆ

Last Updated 5 ಮೇ 2018, 8:34 IST
ಅಕ್ಷರ ಗಾತ್ರ

ಶ್ರೀನಗರ: ಶ್ರೀನಗರದ ಹೃದಯಭಾಗ ಚತ್ತಾಬಾಲ್‌ನಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಚಕಮಕಿ ಮುಂದುವರೆದಿದ್ದು, ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ.

ಒಬ್ಬ ಸಿಆರ್‌ಪಿಎಫ್‌ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಗ್ರರು ಚತ್ತಾಬಾಲ್‌ನಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

ಇನ್ನೂ ರಾಜ್ಯ ಪೊಲೀಸ್ ಮತ್ತು ಸಿಆರ್‌ಪಿಎಫ್ ಪಡೆ ಘಾಸಿ ಮೊಹೊಲ್ಲಾ ಎಂಬಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT