ವರ್ತೂರು ಪ್ರಕಾಶ್ ಅವರು ಚುನಾವಣಾ ಪ್ರಚಾರಕ್ಕೆ ಹೋದ ಕಡೆಯಲ್ಲೆಲ್ಲಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಮೇ 2ರಂದು ಕೋಲಾರದ ಗಾಂಧಿನಗರ ನಿವಾಸಿಗಳು ಶಾಸಕರ ಚುನಾವಣಾ ಪ್ರಚಾರಕ್ಕೆ ಅವಕಾಶ ಕೊಡದೆ ವಾಪಸ್ ಕಳುಹಿಸಿದ್ದರು. ನಗರದ 13ನೇ ವಾರ್ಡ್ ನಿವಾಸಿಗಳು ಶುಕ್ರವಾರ (ಮೇ 4) ಕಪ್ಪುಪಟ್ಟಿ ಧರಿಸಿ ಧರಣಿ ಮಾಡಿ ಶಾಸಕರು ಪ್ರಚಾರ ನಡೆಸಲು ವಾರ್ಡ್ಗೆ ಬರಬಾರದೆಂದು ವಿರೋಧ ವ್ಯಕ್ತಪಡಿಸಿದ್ದರು.