<p><strong>ತಿರುವನಂತಪುರಂ</strong>: ‘ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಹಾಕಲಾಗಿರುವ ಮುಹಮ್ಮದ್ ಅಲಿ ಜಿನ್ನಾ ಭಾವಚಿತ್ರವನ್ನು ತೆಗೆದು ಹಾಕುವಂತೆ ಪ್ರತಿಭಟಿಸುತ್ತಿರುವ ಬಲಪಂಥೀಯರ ಬೇಡಿಕೆಯ ಹಿಂದಿನ ತರ್ಕವಾದರೂ ಏನು’ ಎಂದು ಜಮಾತ್–ಎ–ಇಸ್ಲಾಮಿ ಹಿಂದ್ ಪ್ರಶ್ನಿಸಿದೆ.</p>.<p>ಜಿನ್ನಾ ಭಾವಚಿತ್ರ ತೆಗೆದು ಹಾಕುವಂತೆ ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದ ನಂತರ ಪ್ರತಿಭಟನೆ, ಹಿಂಸಾಚಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಎತ್ತಿರುವ ಸಂಘಟನೆಯ ಅಧ್ಯಕ್ಷ ಮೌಲಾನಾ ಸೈಯದ್ ಜಲಾಲುದ್ದೀನ್ ಉಮರಿ, ‘ಈ ವಿಷಯ ಕುರಿತು ವಿವಾದ ಸೃಷ್ಟಿಸುವವರು ಕೋರ್ಟ್ ಮೆಟ್ಟಿಲೇರಲಿ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<p>‘ವಿದ್ಯಾರ್ಥಿ ಸಂಘದ ಆಜೀವ ಸದಸ್ಯರ ಭಾವಚಿತ್ರಗಳನ್ನು ಸಂಘದ ಕಚೇರಿಯಲ್ಲಿ ಅಳವಡಿಸುವುದು ವಿಶ್ವವಿದ್ಯಾಲಯದಲ್ಲಿರುವ ರೂಢಿ. ಅದರಂತೆ ಕಳೆದ 80 ವರ್ಷಗಳಿಂದ ಜಿನ್ನಾ ಭಾವಚಿತ್ರವೂ ಅಲ್ಲಿದೆ’ ಎಂದಿದ್ದಾರೆ.</p>.<p>‘ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಜಿನ್ನಾ ವಹಿಸಿದ್ದ ಪಾತ್ರವನ್ನು ಬಿಜೆಪಿಯ ಕೆಲವು ಹಿರಿಯ ಮುಖಂಡರೂ ಒಪ್ಪುತ್ತಾರೆ. ಅಲ್ಲದೇ, ಭಾವಚಿತ್ರ ತೆರವಿಗಾಗಿ ಉಂಟಾಗಿರುವ ವಿವಾದ ಸಣ್ಣ ವಿಷಯ. ಅಗತ್ಯಕ್ಕಿಂತ ಹೆಚ್ಚು ವೈಭವೀಕರಿಸಿ ಪ್ರಚಾರ ನೀಡಲಾಗಿದೆ. ಈ ವಿಷಯವನ್ನು ವಿದ್ಯಾರ್ಥಿ ಮುಖಂಡರೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳಬೇಕು’ ಎಂದೂ ಉಮರಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ‘ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಹಾಕಲಾಗಿರುವ ಮುಹಮ್ಮದ್ ಅಲಿ ಜಿನ್ನಾ ಭಾವಚಿತ್ರವನ್ನು ತೆಗೆದು ಹಾಕುವಂತೆ ಪ್ರತಿಭಟಿಸುತ್ತಿರುವ ಬಲಪಂಥೀಯರ ಬೇಡಿಕೆಯ ಹಿಂದಿನ ತರ್ಕವಾದರೂ ಏನು’ ಎಂದು ಜಮಾತ್–ಎ–ಇಸ್ಲಾಮಿ ಹಿಂದ್ ಪ್ರಶ್ನಿಸಿದೆ.</p>.<p>ಜಿನ್ನಾ ಭಾವಚಿತ್ರ ತೆಗೆದು ಹಾಕುವಂತೆ ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದ ನಂತರ ಪ್ರತಿಭಟನೆ, ಹಿಂಸಾಚಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಎತ್ತಿರುವ ಸಂಘಟನೆಯ ಅಧ್ಯಕ್ಷ ಮೌಲಾನಾ ಸೈಯದ್ ಜಲಾಲುದ್ದೀನ್ ಉಮರಿ, ‘ಈ ವಿಷಯ ಕುರಿತು ವಿವಾದ ಸೃಷ್ಟಿಸುವವರು ಕೋರ್ಟ್ ಮೆಟ್ಟಿಲೇರಲಿ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<p>‘ವಿದ್ಯಾರ್ಥಿ ಸಂಘದ ಆಜೀವ ಸದಸ್ಯರ ಭಾವಚಿತ್ರಗಳನ್ನು ಸಂಘದ ಕಚೇರಿಯಲ್ಲಿ ಅಳವಡಿಸುವುದು ವಿಶ್ವವಿದ್ಯಾಲಯದಲ್ಲಿರುವ ರೂಢಿ. ಅದರಂತೆ ಕಳೆದ 80 ವರ್ಷಗಳಿಂದ ಜಿನ್ನಾ ಭಾವಚಿತ್ರವೂ ಅಲ್ಲಿದೆ’ ಎಂದಿದ್ದಾರೆ.</p>.<p>‘ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಜಿನ್ನಾ ವಹಿಸಿದ್ದ ಪಾತ್ರವನ್ನು ಬಿಜೆಪಿಯ ಕೆಲವು ಹಿರಿಯ ಮುಖಂಡರೂ ಒಪ್ಪುತ್ತಾರೆ. ಅಲ್ಲದೇ, ಭಾವಚಿತ್ರ ತೆರವಿಗಾಗಿ ಉಂಟಾಗಿರುವ ವಿವಾದ ಸಣ್ಣ ವಿಷಯ. ಅಗತ್ಯಕ್ಕಿಂತ ಹೆಚ್ಚು ವೈಭವೀಕರಿಸಿ ಪ್ರಚಾರ ನೀಡಲಾಗಿದೆ. ಈ ವಿಷಯವನ್ನು ವಿದ್ಯಾರ್ಥಿ ಮುಖಂಡರೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳಬೇಕು’ ಎಂದೂ ಉಮರಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>