ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ‘ಕನ್ನಡದ ಸ್ಥಿತಿ ಇಂದು ಸರಿ ಇಲ್ಲ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳು ಸರಿ ಇಲ್ಲದಿರುವುದು. ಅನೇಕರು ಕನ್ನಡ ಶಾಲೆ ಉಳಿಯಬೇಕು ಎಂದು ಹೋರಾಡಿದರೇ ಹೊರತು ಶಾಲೆಗಳನ್ನು ಉದ್ಧಾರ ಮಾಡಬೇಕು ಎಂದು ಯೋಚಿಸಿ ಕೆಲಸ ಮಾಡಿಲ್ಲ. ಇನ್ನು ಮುಂದಾದರೂ ಶಾಸಕರಾದವರು ತಮ್ಮ ಅಧಿಕಾರಾವಧಿಯಲ್ಲಿ ಹತ್ತು ಸರ್ಕಾರಿ ಶಾಲೆಗಳನ್ನಾದರೂ ಅಭಿವೃದ್ಧಿ ಮಾಡಬೇಕು. ಆಗ ಐದೇ ವರ್ಷಗಳಲ್ಲಿ ರಾಜ್ಯದ ಎಲ್ಲಾ ಶಾಲೆಗಳ ಪರಿಸ್ಥಿತಿ ಸುಧಾರಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.