ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಚುನಾವಣೆ ನಡೆದ ನಂತರ ಯಾವುದೇ ಸರ್ಕಾರಗಳು ಬಂದರೂ ಕೇಳುವುದಕ್ಕೆ ನನ್ನಲ್ಲಿ ಸಾಕಷ್ಟು ಪ್ರಶ್ನೆಗಳಿವೆ. ಪ್ರಶ್ನೆ ಕೇಳುವುದು ನನ್ನೊಬ್ಬನಿಂದ ಆಗುವುದಿಲ್ಲ ಎಂಬ ಕಾರಣಕ್ಕಾಗಿಯೇ ಆಂದೋಲನ ಆರಂಭಿಸಿದ್ದೇನೆ. ರಾಜ್ಯದಲ್ಲಿ ಈಗಾಗಲೇ ಮೂರು ಸಾವಿರ ಜನ ಒಟ್ಟಾಗಿದ್ದಾರೆ’ ಎಂದು ಹೇಳಿದರು.