ಬೆಂಗಳೂರು: ಕಾಡುಗೋಡಿಯ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿಯ ಮನೆಯೊಂದರಲ್ಲಿ ಅಡುಗೆ ಅನಿಲ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡು ಅಪ್ಸರ್ ಪಾಷಾ (22) ಎಂಬುವರು ಮೃತಪಟ್ಟಿದ್ದಾರೆ.
ಸ್ಫೋಟದ ರಭಸಕ್ಕೆ ಕಟ್ಟಡ ಕುಸಿದು ಬಿದ್ದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.