ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಬರುವುದಿಲ್ಲ. ಬಂದರೂ ರೋಗಿಗಳನ್ನು ಸರಿಯಾಗಿ ತಪಾಸಣೆ ಮಾಡುವುದಿಲ್ಲ. ಕಾಟಾಚಾರಕ್ಕೆಂಬಂತೆ ತಪಾಸಣೆ ಮಾಡಿ, ಮಾತ್ರೆ ಮತ್ತು ಔಷಧಿಗಳನ್ನು ಹೊರಗಡೆ ಚೀಟಿ ಬರೆದು ಕೊಡುತ್ತಿದ್ದಾರೆ. ಇಷ್ಟಲ್ಲದೆ ಆಸ್ಪತ್ರೆಯಲ್ಲಿ ಸ್ವಚ್ಛತೆ ಎಂಬುದು ಮಾಯವಾಗಿದೆ. ಕುಡಿಯಲು ನೀರಿಲ್ಲ, ಶೌಚಾಲಯ ಇಲ್ಲ ಅಮರಾಪುರ ಗ್ರಾಮದ ಮಲ್ಲಪ್ಪ ದೂರಿದರು.