ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ಚೀನಾದಲ್ಲಿ 2013ರಲ್ಲಿ ನಡೆದ ಡಬ್ಲ್ಯೂಇಎಫ್ (ವಿಶ್ವ ಆರ್ಥಿಕ ಸಮಾವೇಶ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ಸಂದರ್ಭ ಅವರು ವಿಜಯ್ ಈಶ್ವರ್ ಎಂಬ ತಲೆಮರೆಸಿಕೊಂಡಿರುವ ಆರೋಪಿಯನ್ನು ಭೇಟಿಯಾಗಿದ್ದರು’ ಎಂದು ಆರೋಪಿಸಿದರು.