ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಕೀಳು ಮಟ್ಟದ ಭಾಷೆ ಬಳಸುತ್ತಿರುವುದು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಲ್ಲ. ಪ್ರಧಾನಿ ಕಚೇರಿ ಘನತೆಗೆ ಧಕ್ಕೆ ತಂದಂತಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದಿನ ಯಾವ ಪ್ರಧಾನಿಗಳು ಈ ರೀತಿ ಮಾತನಾಡುತ್ತಿರಲಿಲ್ಲ ಎಂದರು.
ಕರ್ನಾಟಕದ ಚುನಾವಣಾ ಫಲಿತಾಂಶವು ಇಡೀ ದೇಶದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಸಿದ್ದರಾಮಯ್ಯ ಅವರ ಡೈನಾಮಿಕ್ ನಾಯಕತ್ವದ ಸರ್ಕಾರ ನೀಡಿದ ಜನಪರ, ಅಭಿವೃದ್ಧಿ ಶೀಲ ಆಡಳಿತದಿಂದಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.
LIVE: Former Prime Minister Dr Manmohan Singh addresses a press conference in Bengaluru. https://t.co/O6vPGUYqKp