ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀಳು ಮಟ್ಟದ ಭಾಷೆ ಸಲ್ಲದು: ಮನಮೋಹನ್‌ ಸಿಂಗ್‌

ದೇಶದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಕರ್ನಾಟಕದ ಚುನಾವಣಾ ಫಲಿತಾಂಶ
Last Updated 7 ಮೇ 2018, 7:40 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಭಾಷಣದಲ್ಲಿ ಕೀಳು ಮಟ್ಟದ ಭಾಷೆ ಬಳಸುತ್ತಿರುವುದು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಲ್ಲ. ಪ್ರಧಾನಿ ಕಚೇರಿ ಘನತೆಗೆ ಧಕ್ಕೆ ತಂದಂತಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ‌ ಮಾತನಾಡಿದ ಅವರು ಹಿಂದಿ‌ನ ಯಾವ ಪ್ರಧಾನಿಗಳು ಈ ರೀತಿ ಮಾತನಾಡುತ್ತಿರಲಿಲ್ಲ ಎಂದರು.

ಕರ್ನಾಟಕದ ಚುನಾವಣಾ ಫಲಿತಾಂಶವು ಇಡೀ ದೇಶದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಸಿದ್ದರಾಮಯ್ಯ ಅವರ ಡೈನಾಮಿಕ್ ನಾಯಕತ್ವದ ಸರ್ಕಾರ ‌ನೀಡಿದ ಜನಪರ, ಅಭಿವೃದ್ಧಿ ಶೀಲ ಆಡಳಿತದಿಂದಾಗಿ ಕಾಂಗ್ರೆಸ್  ಮತ್ತೆ ಅಧಿಕಾರಕ್ಕೆ ಬರಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT