ಅಂತರರಾಷ್ಟ್ರೀಯ ಖ್ಯಾತಿಯ ವಿ. ಕೃಷ್ಣಾಜಿರಾವ್ ಅವರ ತಂಡ ಗಾಳಿಪಟದೊಂದಿಗೆ ಹಾಜರಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ‘ಮತದಾನದ ಪ್ರಮಾಣ ಹೆಚ್ಚಿಸಬೇಕೆನ್ನುವ ಉದ್ದೇಶದಿಂದ ಗಾಳಿಪಟ ಉತ್ಸವ ಹಮ್ಮಿಕೊಳ್ಳಲಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿರುವುದು ಸಂತಸದ ವಿಚಾರ. ಇಂದಿನ ದಿನಗಳಲ್ಲಿ ಎಲ್ಲರಲ್ಲೂ ಮತ ಜಾಗೃತಿ ಮೂಡುತ್ತಿದೆ. ಹಲವಾರು ಸಂಘ, ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ’ ಎಂದರು.