ಇಲ್ಲಿನ ಹನೂರಿನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, 'ಯಡಿಯೂರಪ್ಪ ಅಧಿಕಾರದಲ್ಲಿ ಇದ್ದಾಗ ರೈತರ ಸಾಲ ಮನ್ನಾ ಮಾಡಲು ಆಗಲಿಲ್ಲ. ಆಗ ಕೇಳಿದರೆ ನಮ್ಮ ಬಳಿ ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಅಂದಿದ್ರು. ಆದರೆ ಈಗ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇವೆ ಅಂತಾರೆ. ಇವರಿಗೆ ಒಂದು ನಾಲಿಗೆನಾ ಎರಡು ನಾಲಿಗೆನಾ' ಎಂದು ಹರಿಹಾಯ್ದರು.