ಕಾವೇರಿ ಜಲವಿವಾದ ನ್ಯಾಯಮಂಡಳಿ ನೀಡಿದ್ದ ಐತೀರ್ಪನ್ನು ಮಾರ್ಪಡಿಸುವ ಮೂಲಕ ಸುಪ್ರೀಂ ಕೋರ್ಟ್ ಕಳೆದ ಫೆಬ್ರುವರಿ 16ರಂದು ನೀಡಿದ ತೀರ್ಪಿನ ಅನ್ವಯ ನೀರು ಹಂಚಿಕೆ ಕುರಿತ ಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಕಣಿವೆ ವ್ಯಾಪ್ತಿಯ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸರ್ಕಾರಗಳ ಮುಖ್ಯ ಕಾರ್ಯದರ್ಶಿಯವರ ಸಭೆ ಆಯೋಜಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ.