<p><strong>ವಿಜಯಪುರ:</strong> ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಜಯಪುರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ರ್ಯಾಲಿ ಉದ್ಘಾಟಿಸಿ, ಕೆಲವೇ ಕ್ಷಣಗಳಲ್ಲಿ ಮಾತನಾಡಲಿದ್ದಾರೆ.</p>.<p>2016ರ ನಂತರ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಅವರ ಮಾತುಗಳನ್ನು ಕೇಳಲು ಜನರು ಕಾತರದಿಂದ ಕಾಯುತ್ತಿದ್ದಾರೆ.</p>.<p>ನೆತ್ತಿ ಸುಡುವ ಕೆಂಡದಂತ ಬಿಸಿಲನ್ನು ಲೆಕ್ಕಿಸದೆ, ತಂಡೊಪತಂಡವಾಗಿ ಜನರು ನಗರದ ಸೊಲ್ಲಾಪುರ ರಸ್ತೆಯ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಎ.ಎಸ್.ಟಿ. ವಾಣಿಜ್ಯ ಕಾಲೇಜಿನ ಆವರಣಕ್ಕೆ ಬರುತ್ತಿದ್ದಾರೆ.</p>.<p>ಬಹುತೇಕ ಆಸನಗಳು ಭರ್ತಿಯಾಗಿವೆ. ವಿಜಯಪುರ ಜಿಲ್ಲೆ ಸೇರಿದಂತೆ ನೆರೆಯ ಬಾಗಲಕೋಟೆ, ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಜನರು ಹಾಗೂ ಯಾದಗಿರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಜನರು ಸಹ ರ್ಯಾಲಿಗೆ ಆಗಮಿಸಿದ್ದಾರೆ.</p>.<p>ಬಿಸಿಲ ಬಾಯಾರಿಕೆ ತಣಿಸಲು ರಾಶಿ–ರಾಶಿ ನೀರಿನ ಪ್ಯಾಕೇಟ್ಗಳನ್ನು ಜನರಿಗೆ ವಿತರಿಸಲಾಗುತ್ತಿದೆ.</p>.<p>ಸೋನಿಯಾ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನೇರವಾಗಿ ಎ.ಎಸ್.ಟಿ. ಕಾಲೇಜು ಆವರಣಕ್ಕೆ ಆಗಮಿಸಿ, ಮತದಾರರ ಮನಗೆಲ್ಲಲು ಭಾಷಣ ಮಾಡಲಿದ್ದಾರೆ.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಜಯಪುರದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ರ್ಯಾಲಿ ಉದ್ಘಾಟಿಸಿ, ಕೆಲವೇ ಕ್ಷಣಗಳಲ್ಲಿ ಮಾತನಾಡಲಿದ್ದಾರೆ.</p>.<p>2016ರ ನಂತರ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಅವರ ಮಾತುಗಳನ್ನು ಕೇಳಲು ಜನರು ಕಾತರದಿಂದ ಕಾಯುತ್ತಿದ್ದಾರೆ.</p>.<p>ನೆತ್ತಿ ಸುಡುವ ಕೆಂಡದಂತ ಬಿಸಿಲನ್ನು ಲೆಕ್ಕಿಸದೆ, ತಂಡೊಪತಂಡವಾಗಿ ಜನರು ನಗರದ ಸೊಲ್ಲಾಪುರ ರಸ್ತೆಯ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಎ.ಎಸ್.ಟಿ. ವಾಣಿಜ್ಯ ಕಾಲೇಜಿನ ಆವರಣಕ್ಕೆ ಬರುತ್ತಿದ್ದಾರೆ.</p>.<p>ಬಹುತೇಕ ಆಸನಗಳು ಭರ್ತಿಯಾಗಿವೆ. ವಿಜಯಪುರ ಜಿಲ್ಲೆ ಸೇರಿದಂತೆ ನೆರೆಯ ಬಾಗಲಕೋಟೆ, ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಜನರು ಹಾಗೂ ಯಾದಗಿರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಜನರು ಸಹ ರ್ಯಾಲಿಗೆ ಆಗಮಿಸಿದ್ದಾರೆ.</p>.<p>ಬಿಸಿಲ ಬಾಯಾರಿಕೆ ತಣಿಸಲು ರಾಶಿ–ರಾಶಿ ನೀರಿನ ಪ್ಯಾಕೇಟ್ಗಳನ್ನು ಜನರಿಗೆ ವಿತರಿಸಲಾಗುತ್ತಿದೆ.</p>.<p>ಸೋನಿಯಾ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನೇರವಾಗಿ ಎ.ಎಸ್.ಟಿ. ಕಾಲೇಜು ಆವರಣಕ್ಕೆ ಆಗಮಿಸಿ, ಮತದಾರರ ಮನಗೆಲ್ಲಲು ಭಾಷಣ ಮಾಡಲಿದ್ದಾರೆ.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>