<p><strong>ಬೆಂಗಳೂರು:</strong> ನಗರದಲ್ಲಿ ಮಂಗಳವಾರ ಜೋರಾದ ಮಳೆ ಸುರಿದಿದ್ದು, ಕೆಲವೆಡೆ ಮರಗಳು ಉರುಳಿ ಬಿದ್ದಿದ್ದವು.</p>.<p>ಬಸವನಗುಡಿ, ಜಯನಗರ, ಹನುಮಂತನಗರ, ಬಿಟಿಎಂ ಲೇಔಟ್, ದೊಮ್ಮಲೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಆಗಿದೆ. ಜಯನಗರ 4ನೇ ಹಂತದ ’ಟಿ ಬ್ಲಾಕ್’ ಹಾಗೂ ಬಸವನಗುಡಿಯಲ್ಲಿ ಮರಗಳು ಉರುಳಿಬಿದ್ದಿದ್ದವು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡ್ಡಿ ಉಂಟಾಯಿತು.</p>.<p>ಮರ ಬಿದ್ದ ಬಗ್ಗೆ ಸ್ಥಳೀಯರು ಬಿಬಿಎಂಪಿ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋದ ಅರಣ್ಯ ವಿಭಾಗದ ಸಿಬ್ಬಂದಿ, ಮರ ತೆರವುಗೊಳಿಸುವ ಕೆಲಸದಲ್ಲಿ ನಿರತರಾಗಿದ್ದರು.</p>.<p>’ಮರ ಬಿದ್ದಿದ್ದು ಬಿಟ್ಟರೆ ಬೇರೆ ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿಲ್ಲ. ಮರ ಬಿದ್ದ ರಸ್ತೆಗಳ ಅರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲಾಗಿದೆ. ಪೂರ್ತಿ ಮರಗಳ ತೆರವು ಕಾರ್ಯ ರಾತ್ರಿಯಿಡಿ ನಡೆಯಲಿದೆ’ ಎಂದು ಸಹಾಯವಾಣಿ ಅಧಿಕಾರಿ ತಿಳಿಸಿದರು.</p>.<p>ಅರ್ಧಗಂಟೆ ಕಾದು ನಿಂತ ವಾಹನಗಳು; ದೊಮ್ಮಲೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ವಿಪರೀತವಾಗಿತ್ತು. ಮೇಲ್ಸೇತುವೆಯಲ್ಲೇ ಅರ್ಧಗಂಟೆವರೆಗೂ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.</p>.<p>‘ದೊಮ್ಮಲೂರು ಭಾಗದಲ್ಲಿ ಮಳೆಯು ಜೋರಾಗಿ ಸುರಿಯಿತು. ರಸ್ತೆಯಲ್ಲೇ ನೀರು ಹರಿಯಿತು. ಅದರಿಂದ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು. ಅದು ದಟ್ಟಣೆಗೆ ಕಾರಣವಾಯಿತು’ ಎಂದು ಸಂಚಾರ ಪೊಲೀಸರು ತಿಳಿಸಿದರು.</p>.<p><strong>ನೀರಿನ ಅದಾಲತ್ ಇಂದು</strong></p>.<p><strong>ಬೆಂಗಳೂರು: </strong>ಜಲಮಂಡಳಿಯ ಕೇಂದ್ರ 2 ಉಪವಿಭಾಗದ, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ನೀರಿನ ಬಿಲ್ಲು ನೀಡುವಿಕೆಯಲ್ಲಿನ ಗೊಂದಲ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಬುಧವಾರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದೆ.</p>.<p>ಕೇಂದ್ರ 2 ಉಪವಿಭಾಗ ವ್ಯಾಪ್ತಿಯ ಹೈಗ್ರೌಂಡ್ಸ್, ಕೋಲ್ಸ್ ಪಾರ್ಕ್ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗೆ ಸಂಬಂಧಿಸಿದ ವಿವಾದಗಳನ್ನು ಮಿಲ್ಲರ್ ರಸ್ತೆ, ಹೈಗ್ರೌಂಡ್ಸ್ ಇಲ್ಲಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಬಗೆಹರಿಸಿಕೊಳ್ಳಬಹುದು.</p>.<p>ಮಾಹಿತಿಗೆ– 22945191/ 22945187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಮಂಗಳವಾರ ಜೋರಾದ ಮಳೆ ಸುರಿದಿದ್ದು, ಕೆಲವೆಡೆ ಮರಗಳು ಉರುಳಿ ಬಿದ್ದಿದ್ದವು.</p>.<p>ಬಸವನಗುಡಿ, ಜಯನಗರ, ಹನುಮಂತನಗರ, ಬಿಟಿಎಂ ಲೇಔಟ್, ದೊಮ್ಮಲೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಆಗಿದೆ. ಜಯನಗರ 4ನೇ ಹಂತದ ’ಟಿ ಬ್ಲಾಕ್’ ಹಾಗೂ ಬಸವನಗುಡಿಯಲ್ಲಿ ಮರಗಳು ಉರುಳಿಬಿದ್ದಿದ್ದವು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡ್ಡಿ ಉಂಟಾಯಿತು.</p>.<p>ಮರ ಬಿದ್ದ ಬಗ್ಗೆ ಸ್ಥಳೀಯರು ಬಿಬಿಎಂಪಿ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋದ ಅರಣ್ಯ ವಿಭಾಗದ ಸಿಬ್ಬಂದಿ, ಮರ ತೆರವುಗೊಳಿಸುವ ಕೆಲಸದಲ್ಲಿ ನಿರತರಾಗಿದ್ದರು.</p>.<p>’ಮರ ಬಿದ್ದಿದ್ದು ಬಿಟ್ಟರೆ ಬೇರೆ ಯಾವುದೇ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿಲ್ಲ. ಮರ ಬಿದ್ದ ರಸ್ತೆಗಳ ಅರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲಾಗಿದೆ. ಪೂರ್ತಿ ಮರಗಳ ತೆರವು ಕಾರ್ಯ ರಾತ್ರಿಯಿಡಿ ನಡೆಯಲಿದೆ’ ಎಂದು ಸಹಾಯವಾಣಿ ಅಧಿಕಾರಿ ತಿಳಿಸಿದರು.</p>.<p>ಅರ್ಧಗಂಟೆ ಕಾದು ನಿಂತ ವಾಹನಗಳು; ದೊಮ್ಮಲೂರು ರಸ್ತೆಯಲ್ಲಿ ವಾಹನಗಳ ದಟ್ಟಣೆ ವಿಪರೀತವಾಗಿತ್ತು. ಮೇಲ್ಸೇತುವೆಯಲ್ಲೇ ಅರ್ಧಗಂಟೆವರೆಗೂ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.</p>.<p>‘ದೊಮ್ಮಲೂರು ಭಾಗದಲ್ಲಿ ಮಳೆಯು ಜೋರಾಗಿ ಸುರಿಯಿತು. ರಸ್ತೆಯಲ್ಲೇ ನೀರು ಹರಿಯಿತು. ಅದರಿಂದ ವಾಹನಗಳ ಓಡಾಟ ನಿಧಾನಗತಿಯಲ್ಲಿತ್ತು. ಅದು ದಟ್ಟಣೆಗೆ ಕಾರಣವಾಯಿತು’ ಎಂದು ಸಂಚಾರ ಪೊಲೀಸರು ತಿಳಿಸಿದರು.</p>.<p><strong>ನೀರಿನ ಅದಾಲತ್ ಇಂದು</strong></p>.<p><strong>ಬೆಂಗಳೂರು: </strong>ಜಲಮಂಡಳಿಯ ಕೇಂದ್ರ 2 ಉಪವಿಭಾಗದ, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ನೀರಿನ ಬಿಲ್ಲು ನೀಡುವಿಕೆಯಲ್ಲಿನ ಗೊಂದಲ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಬುಧವಾರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದೆ.</p>.<p>ಕೇಂದ್ರ 2 ಉಪವಿಭಾಗ ವ್ಯಾಪ್ತಿಯ ಹೈಗ್ರೌಂಡ್ಸ್, ಕೋಲ್ಸ್ ಪಾರ್ಕ್ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗೆ ಸಂಬಂಧಿಸಿದ ವಿವಾದಗಳನ್ನು ಮಿಲ್ಲರ್ ರಸ್ತೆ, ಹೈಗ್ರೌಂಡ್ಸ್ ಇಲ್ಲಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯಲ್ಲಿ ಬಗೆಹರಿಸಿಕೊಳ್ಳಬಹುದು.</p>.<p>ಮಾಹಿತಿಗೆ– 22945191/ 22945187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>