ಹೊಸಪೇಟೆ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗುವುದು’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ಬುಧವಾರ ಇಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಆರ್.ಗವಿಯಪ್ಪ ಪರ ಮತಯಾಚಿಸಿ ಅವರು ಮಾತನಾಡಿದರು.
‘ಕಾಂಗ್ರೆಸ್ಗೆ ಅಭಿವೃದ್ಧಿ ಬೇಕಿಲ್ಲ. ಜಾತಿಗಳ ಹೆಸರಿನಲ್ಲಿ ಸಮಾಜ ಒಡೆಯುವುದು ಅದರ ಕೆಲಸವಾಗಿದೆ. ಒಂದು ಕಡೆ ಹನುಮ ಜಯಂತಿ ಮೇಲೆ ನಿರ್ಬಂಧ ವಿಧಿಸುತ್ತದೆ. ಇನ್ನೊಂದು ಕಡೆ ಟಿಪ್ಪು ಜಯಂತಿ ಆಚರಿಸುತ್ತದೆ’ ಎಂದು ಅವರು ಟೀಕಿಸಿದರು.