ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧರ್ಮದ ಹೆಸರಿನಲ್ಲಿ ಜನರನ್ನು ಧ್ರುವೀಕರಣ ಮಾಡುವ ಮೂಲಕ ಬಲ ಹೆಚ್ಚಿಸಿಕೊಳ್ಳಲು ಆರ್ಎಸ್ಎಸ್ ಮತ್ತು ಬಿಜೆಪಿ ಯತ್ನಿಸುತ್ತಿವೆ. ಇದು ವಿಭಿನ್ನ ಧರ್ಮಗಳ ಜನರ ನಡುವೆ ದ್ವೇಷ ಬೆಳೆಯಲು ಕಾರಣವಾಗುತ್ತದೆ. ಅದರಿಂದಾಗಿಯೇ ಘರ್ಷಣೆ, ಕೊಲೆಗಳು ನಡೆಯುತ್ತಿವೆ’ ಎಂದರು.