ಷರೀಫ್ ವಿರುದ್ಧ ತನಿಖೆಗೆ ತರಾಟೆ

ಇಸ್ಲಾಮಾಬಾದ್: ಸುಳ್ಳು ಸುದ್ದಿ ಆಧರಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ತನಿಖೆಗೆ ಆದೇಶಿಸಿದ ಬಗ್ಗೆ ಪ್ರಧಾನಿ ಶಾಹಿದ್ ಅಬ್ಬಾಸಿ ಅವರು ಬುಧವಾರ ಇಲ್ಲಿನ ಭ್ರಷ್ಟಾಚಾರ ತಡೆ ಘಟಕವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಷರೀಫ್ ಅವರು 2016ರಲ್ಲಿ ಭಾರತಕ್ಕೆ ₹32,830 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಭ್ರಷ್ಟಾಚಾರ ತಡೆ ಘಟಕವು ಮಂಗಳವಾರ ತನಿಖೆಗೆ ಆದೇಶಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.