ತಾಲ್ಲೂಕಿನ ಪುಲಮಾಚಿ ಗ್ರಾಮದ ಪಂಚಲಿಂಗ (28) ಮೃತ ವ್ಯಕ್ತಿ, ಜಯರಾಮ (35) ಹಾಗೂ ರಾಜ (28) ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗೇಶ ಎಂಬುವವರಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಡಿಗೇಶಿ ಗ್ರಾಮದಿಂದ ಟ್ರ್ಯಾಕ್ಟರ್ನಲ್ಲಿ ವಿದ್ಯುತ್ ಕಂಬಗಳನ್ನು ಹಾಕಿಕೊಂಡು ಸೋದೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಪಿ ಹೊಡೆಯಿತು. ಆಗ ಮೂರು ಮಂದಿಯ ಮೇಲೆ ವಿದ್ಯುತ್ ಕಂಬಗಳು ಉರುಳಿ ಈ ಅವಘಡ ನಡೆದಿದೆ.