ಪುಸ್ತಕ ಪ್ರಕಟಣೆ ಮತ್ತು ಮಾರಾಟದ ಮೇಲೆ ಅಧೀನ ನ್ಯಾಯಾಲಯ ಹೇರಿದ್ದ ನಿಷೇಧವನ್ನು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ತೆರವುಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಬಾಬಾ ರಾಮ್ದೇವ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್.ಕೆ.ಗೌಬಾ, ನಿಷೇಧವನ್ನು ಮುಂದುವರಿಸಿ ಗುರುವಾರ ಮಧ್ಯಂತರ ಆದೇಶ ಹೊರಡಿಸಿದರು.