ಅವರು ಮಾತನಾಡಿ, ‘ರಾಜ್ಯ ಸರ್ಕಾರ ಭ್ರಷ್ಟಾಚಾರ ಮತ್ತು ಹಗರಣಗಳ ಮುಕ್ತ ಸರ್ಕಾರವಾಗಿದ್ದು 5 ವರ್ಷ ಸುಭದ್ರ ಸರ್ಕಾರ ನೀಡಿದೆ. ಜೊತೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಾಣಮಾಡಿದೆ’ಎಂದರು. ‘ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆಯಿದ್ದು ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಶತಸಿದ್ಧ’ ಎಂದು ಹೇಳಿದರು. ಅಭ್ಯರ್ಥಿ ಎನ್.ನಾಗರಾಜ್ ಇದ್ದರು.