‘ನೀವು ಸಾಕಷ್ಟು ಯೋಜನೆಗಳನ್ನು ಹೊಂದಿದ್ದೀರಿ. ದೆಹಲಿಯಲ್ಲಿಯೇ ನಿಮಗೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿಲ್ಲ. ಬದಲಿಗೆ ಇಡೀ ದೇಶದ ಕುರಿತು ಮಾತನಾಡುತ್ತೀರಿ’ ಎಂದು ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎ.ಎನ್.ಎಸ್. ನಾಡಕರ್ಣಿ ಅವರಿಗೆ ಪೀಠ ಹೇಳಿದೆ.