<p><strong>ಬೆಂಗಳೂರು: </strong>ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಸುವುದಕ್ಕೆ ಸಂಬಂಧಿಸಿದಂತೆ ಪೈಪುಗಳನ್ನು ಅಳವಡಿಸಲು ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಉಡುಪಿ ಜಿಲ್ಲಾ ರೈತಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ರಜಾಕಾಲದ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಕಾರ್ಯಪಾಲಕ ಎಂಜಿನಿಯರ್, ಉಡುಪಿ ನಗರಸಭೆ ಆಯುಕ್ತರು, ಕರ್ನಾಟಕ ನೀರಾವರಿ ನಿಗಮದ ಶಿವಮೊಗ್ಗ ವಲಯದ ಮುಖ್ಯ ಎಂಜಿನಿಯರ್ಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p><strong>ಅರ್ಜಿಯಲ್ಲಿ ಏನಿದೆ?: </strong>‘ಉಡುಪಿ ನಗರಕ್ಕೆ 40 ಕಿ.ಮೀನಷ್ಟು ದೂರ ಪೈಪ್ ಲೈನ್ ಅಳವಡಿಸಿ ನೀರು ತರುವ ಅಗತ್ಯವಿಲ್ಲ. ಸೀತಾನದಿ ಅಥವಾ ಸ್ವರ್ಣಾ ನದಿಯಿಂದಲೇ ತರಬಹುದು. ಆದರೆ ವಾರಾಹಿ ನದಿಯಿಂದ 41 ಎಂಎಲ್ಡಿ ನೀರು ತರಲು ಉದ್ದೇಶಿಸಿರುವುದು ಸರಿಯಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>‘2016ರಲ್ಲಿಯೇ ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಸುಮಾರು ₹ 122 ಕೋಟಿ ವೆಚ್ಚದಲ್ಲಿ ಅಮೃತ್ ಯೋಜನೆಯಡಿ ಕೊಳವೆ ಮಾರ್ಗ ಅಳವಡಿಸಿ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿತ್ತು. ಈ ಯೋಜನೆ ಕಾರ್ಯಸಾಧುವಲ್ಲ ಎಂದು ಕೈಬಿಡಲಾಗಿತ್ತು. ಆದರೆ, ಈಗ ಪುನಃ ಪೈಪ್ಲೈನ್ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ. ಇದರಿಂದ ವೃಥಾ ಹಣ ಪೋಲಾಗಲಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಸುವುದಕ್ಕೆ ಸಂಬಂಧಿಸಿದಂತೆ ಪೈಪುಗಳನ್ನು ಅಳವಡಿಸಲು ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.</p>.<p>ಈ ಕುರಿತಂತೆ ಉಡುಪಿ ಜಿಲ್ಲಾ ರೈತಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ರಜಾಕಾಲದ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಕಾರ್ಯಪಾಲಕ ಎಂಜಿನಿಯರ್, ಉಡುಪಿ ನಗರಸಭೆ ಆಯುಕ್ತರು, ಕರ್ನಾಟಕ ನೀರಾವರಿ ನಿಗಮದ ಶಿವಮೊಗ್ಗ ವಲಯದ ಮುಖ್ಯ ಎಂಜಿನಿಯರ್ಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.</p>.<p><strong>ಅರ್ಜಿಯಲ್ಲಿ ಏನಿದೆ?: </strong>‘ಉಡುಪಿ ನಗರಕ್ಕೆ 40 ಕಿ.ಮೀನಷ್ಟು ದೂರ ಪೈಪ್ ಲೈನ್ ಅಳವಡಿಸಿ ನೀರು ತರುವ ಅಗತ್ಯವಿಲ್ಲ. ಸೀತಾನದಿ ಅಥವಾ ಸ್ವರ್ಣಾ ನದಿಯಿಂದಲೇ ತರಬಹುದು. ಆದರೆ ವಾರಾಹಿ ನದಿಯಿಂದ 41 ಎಂಎಲ್ಡಿ ನೀರು ತರಲು ಉದ್ದೇಶಿಸಿರುವುದು ಸರಿಯಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.</p>.<p>‘2016ರಲ್ಲಿಯೇ ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಸುಮಾರು ₹ 122 ಕೋಟಿ ವೆಚ್ಚದಲ್ಲಿ ಅಮೃತ್ ಯೋಜನೆಯಡಿ ಕೊಳವೆ ಮಾರ್ಗ ಅಳವಡಿಸಿ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿತ್ತು. ಈ ಯೋಜನೆ ಕಾರ್ಯಸಾಧುವಲ್ಲ ಎಂದು ಕೈಬಿಡಲಾಗಿತ್ತು. ಆದರೆ, ಈಗ ಪುನಃ ಪೈಪ್ಲೈನ್ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ. ಇದರಿಂದ ವೃಥಾ ಹಣ ಪೋಲಾಗಲಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>