ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೌರಿಗೆ ಸೂಕ್ತ ಭದ್ರತೆ ನೀಡಬೇಕಿತ್ತು’

ಚಲನಚಿತ್ರ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌
Last Updated 10 ಮೇ 2018, 20:38 IST
ಅಕ್ಷರ ಗಾತ್ರ

ಶಿಕಾರಿಪುರ: ನಕ್ಸಲೈಟ್‌ಗಳನ್ನು ಮುಖ್ಯವಾಹಿನಿಗೆ ತರುವ ಕಾರ್ಯ ಮಾಡಿದ್ದ ಗೌರಿ ಲಂಕೇಶ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಭದ್ರತೆ ನೀಡಬೇಕಿತ್ತು ಎಂದು ಚಲನಚಿತ್ರ ನಿರ್ದೇಶಕ, ಗೌರಿಯ ತಮ್ಮ ಇಂದ್ರಜಿತ್‌ ಲಂಕೇಶ್‌ ಪುನರುಚ್ಚರಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಹತ್ಯೆಯ ನಂತರ ಆರೋಪಿಗಳನ್ನು ಪತ್ತೆಹಚ್ಚಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಲಪಂಥೀಯರು ಹತ್ಯೆ ಮಾಡಿದ್ದಾರೆ ಎಂದು ಹೇಳುವವರು ಸಾಕ್ಷಿ ನೀಡಬೇಕು’ ಎಂದರು.

ರಾಜ್ಯದ ಹೃದಯ ಭಾಗವಾದ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ ಅವರು, ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT