<p><strong>ಬೆಳಗಾವಿ:</strong> ‘ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಇಲ್ಲವೇ ಬಂಧಿಸಬೇಕು’ ಎಂದು ಸಂಸದ ಸುರೇಶ ಅಂಗಡಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ, ಕಾಂಗ್ರೆಸ್ಸಿನ ಫಿರೋಜ್ ಸೇಠ್ ಅವರು ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ದೇಶದ್ರೋಹಿ ಘೋಷಣೆ ಕೂಗಿರುವ ದೃಶ್ಯಗಳು ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗಿವೆ. ಈ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು, ಕಿಡಿಗೇಡಿಗಳನ್ನು ಪತ್ತೆ ಹಚ್ಚಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಗಡಿಭಾಗದಲ್ಲಿ ಸರ್ಜಿಕಲ್ ದಾಳಿ ಮೂಲಕ ದೇಶದ್ರೋಹಿಗಳನ್ನು ಸೆದೆಬಡಿಯುತ್ತಿದ್ದರೆ, ಇಲ್ಲಿ ಬೆಳಗಾವಿಯಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲಾಗುತ್ತಿದೆ ಎಂದರು.</p>.<p>ಮಹಾನಗರ ಪಾಲಿಕೆ ಆಡಳಿತದಲ್ಲಿ ಸೇಠ್ ಅವರು ಮೀತಿಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದರಿಂದ ನೊಂದ ಮೇಯರ್ ಹಾಗೂ ಹಲವು ಜನ ಸದಸ್ಯರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಹಿರಿಯ ವಕೀಲ ಎಂ.ಬಿ.ಜಿರಲಿ ಮಾತನಾಡಿ, ದೇಶದ್ರೋಹಿ ಘೋಷಣೆ ಕೂಗಿರುವ ವಿಡಿಯೊ ತುಣಕುಗಳನ್ನು ನೋಡಿದ ದೇಶಭಕ್ತರು ಪೊಲೀಸರಿಗೆ ಠಾಣೆ ನೀಡಿದ್ದಾರೆ. ಫಿರೋಜ್ ಸೇಠ್ ಆರೋಪಿಸಿದಂತೆ ಇವರು ಬಿಜೆಪಿಯ ಕಾರ್ಯಕರ್ತರಲ್ಲ ಎಂದು ಹೇಳಿದರು.</p>.<p>ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಬೆನಕೆ, ಮುರಗೇಶ ಪಾಟೀಲ, ಕಿರಣ ಜಾಧವ, ಶ್ರೀನಿವಾಸ ಬೀಸನಕೊಪ್ಪ ಹಾಗೂ ರಾಜು ಚಿಕ್ಕನಗೌಡರ ಇದ್ದರು.</p>.<p>**<br /> ಶಾಸಕ ಫಿರೋಜ್ ಸೇಠ್ 10 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಏನು ಕೊಡುಗೆ ನೀಡಿದ್ದಾರೆ? ಕೇವಲ ಅಕ್ರಮ ಕಸಾಯಿಖಾನೆಗಳಿಗೆ ರಕ್ಷಣೆ ಒದಗಿಸುವುದನ್ನೇ ಮಾಡಿದ್ದಾರೆ –<br /> <strong>ಸುರೇಶ ಅಂಗಡಿ, ಸಂಸದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಇಲ್ಲವೇ ಬಂಧಿಸಬೇಕು’ ಎಂದು ಸಂಸದ ಸುರೇಶ ಅಂಗಡಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.</p>.<p>ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ, ಕಾಂಗ್ರೆಸ್ಸಿನ ಫಿರೋಜ್ ಸೇಠ್ ಅವರು ಚುನಾವಣಾ ಪ್ರಚಾರ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ದೇಶದ್ರೋಹಿ ಘೋಷಣೆ ಕೂಗಿರುವ ದೃಶ್ಯಗಳು ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗಿವೆ. ಈ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು, ಕಿಡಿಗೇಡಿಗಳನ್ನು ಪತ್ತೆ ಹಚ್ಚಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಗಡಿಭಾಗದಲ್ಲಿ ಸರ್ಜಿಕಲ್ ದಾಳಿ ಮೂಲಕ ದೇಶದ್ರೋಹಿಗಳನ್ನು ಸೆದೆಬಡಿಯುತ್ತಿದ್ದರೆ, ಇಲ್ಲಿ ಬೆಳಗಾವಿಯಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲಾಗುತ್ತಿದೆ ಎಂದರು.</p>.<p>ಮಹಾನಗರ ಪಾಲಿಕೆ ಆಡಳಿತದಲ್ಲಿ ಸೇಠ್ ಅವರು ಮೀತಿಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದರಿಂದ ನೊಂದ ಮೇಯರ್ ಹಾಗೂ ಹಲವು ಜನ ಸದಸ್ಯರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<p>ಹಿರಿಯ ವಕೀಲ ಎಂ.ಬಿ.ಜಿರಲಿ ಮಾತನಾಡಿ, ದೇಶದ್ರೋಹಿ ಘೋಷಣೆ ಕೂಗಿರುವ ವಿಡಿಯೊ ತುಣಕುಗಳನ್ನು ನೋಡಿದ ದೇಶಭಕ್ತರು ಪೊಲೀಸರಿಗೆ ಠಾಣೆ ನೀಡಿದ್ದಾರೆ. ಫಿರೋಜ್ ಸೇಠ್ ಆರೋಪಿಸಿದಂತೆ ಇವರು ಬಿಜೆಪಿಯ ಕಾರ್ಯಕರ್ತರಲ್ಲ ಎಂದು ಹೇಳಿದರು.</p>.<p>ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ ಬೆನಕೆ, ಮುರಗೇಶ ಪಾಟೀಲ, ಕಿರಣ ಜಾಧವ, ಶ್ರೀನಿವಾಸ ಬೀಸನಕೊಪ್ಪ ಹಾಗೂ ರಾಜು ಚಿಕ್ಕನಗೌಡರ ಇದ್ದರು.</p>.<p>**<br /> ಶಾಸಕ ಫಿರೋಜ್ ಸೇಠ್ 10 ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಏನು ಕೊಡುಗೆ ನೀಡಿದ್ದಾರೆ? ಕೇವಲ ಅಕ್ರಮ ಕಸಾಯಿಖಾನೆಗಳಿಗೆ ರಕ್ಷಣೆ ಒದಗಿಸುವುದನ್ನೇ ಮಾಡಿದ್ದಾರೆ –<br /> <strong>ಸುರೇಶ ಅಂಗಡಿ, ಸಂಸದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>