<p><strong>ಬೆಂಗಳೂರು:</strong> ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಪಾತಿ ತೀರ್ಪು ಪಡೆಯಲು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಪ್ರಭಾವ ಬೀರಿದ್ದರು ಎಂಬ ಆರೋಪದ ಕುರಿತಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಹೈಕೋರ್ಟ ಆದೇಶಿಸಿದೆ.</p>.<p>ಈ ಕುರಿತಂತೆ ಬಿಜೆಪಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸಲ್ಲಿಸಿರುವ ರಿಟ್ ಅರ್ಜಿಯನ್ನು ರಜಾಕಾಲದ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್ ವಿಚಾರಣೆ ನಡೆಸಿದರು.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕಾರದಲ್ಲಿ ಟಿ.ವಿ.ಚಾನೆಲ್, ಸುದ್ದಿ ಪತ್ರಿಕೆ, ಡಿಜಿಟಲ್ ಮೀಡಿಯಾ, ರೇಡಿಯೋ, ಮನರಂಜನಾ ಚಾನೆಲ್ಗಳು, ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಪ್ರಕಟಿಸಬಾರದು’ ಎಂದು ನಿರ್ಬಂಧ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.</p>.<p>‘ಯಾವುದೇ ಅಭ್ಯರ್ಥಿ ವಿರುದ್ಧ ವೈಯಕ್ತಿಕ ಘನತೆಗೆ ಧಕ್ಕೆ ಉಂಟು ಮಾಡುವ ಸುದ್ದಿಯನ್ನು ಯಾವುದೇ ಟಿ.ವಿ.ಚಾನೆಲ್, ಪತ್ರಿಕೆ, ಸೋಷಿಯಲ್ ಮೀಡಿಯಾ, ರೇಡಿಯೋ, ವೆಬ್ ಪೋರ್ಟಲ್ ಗಳಲ್ಲಿ ಪ್ರಕಟಿಸುವಂತಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶವನ್ನು ಈ ಕೂಡಲೇ ಎಲ್ಲ ಮಾಧ್ಯಮಗಳಿಗೆ ಇಮೇಲ್ ಮಖಾಂತರ ತಲುಪಿಸುವಂತೆಯೂ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶಿಸಲಾಗಿದೆ.</p>.<p><strong>ಅರ್ಜಿದಾರರ ಆಕ್ಷೇಪಗಳು ಏನು?:</strong></p>.<p>* ಆಧಾರರಹಿತ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ.</p>.<p>* ತನಿಖೆ, ವಿಚಾರಣೆ ಅಥವಾ ಕೋರ್ಟ್ ಆದೇಶಗಳಿಲ್ಲದೆ ದುರುದ್ದೇಶಪೂರ್ವಕವಾಗಿ ಪದೇ ಪದೇ ಬಿತ್ತರಿಸುತ್ತಿದ್ದಾರೆ.</p>.<p>* ಅರ್ಜಿದಾರರ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಪಕ್ಷದ ಘನತೆ ಹಾಳು ಮಾಡಲು ಯತ್ನಿಸುತ್ತಿದ್ದಾರೆ.<br /> ಆಧಾರ ರಹಿತ ಸುದ್ದಿ ಪ್ರಸಾರ ಮಾಡುತ್ತಿದ್ದಾರೆ.</p>.<p>* ಸುದ್ದಿ ಮಾಧ್ಯಮಗಳ ಮೇಲೆ ಮುಖ್ಯ ಚುನಾವಣಾ ಅಧಿಕಾರಿ ಕ್ರಮ ಕೈಗೊಳ್ಳುತ್ತಿಲ್ಲ.</p>.<p>* ಮಾಧ್ಯಮಗಳ ಮೇಲೆ ಪರಿಣಾಮಕಾರಿ ನಿಯಂತ್ರಣ ಇಲ್ಲವಾಗಿದೆ.</p>.<p>* ಇದರ ಹಿಂದೆ ಕೆಲವು ಹಿತಾಸಕ್ತಿಗಳ ಕೈವಾಡ ಇದೆ. ನಮ್ಮ ಅಭ್ಯರ್ಥಿ ರಾಮುಲುಗೆ ಮುಜುಗರ ಉಂಟು ಮಾಡಬೇಕು ಎಂಬುದೇ ಮಾಧ್ಯಮಗಳ ಉದ್ದೇಶವಾಗಿದೆ.</p>.<p>* ಇವರು ನಿವೃತ್ತ ಸಿಜೆಐ ವಿರುದ್ಧ ಆರೋಪ ಮಾಡುತ್ತಿದ್ದು ಇದರಿಂದ ನ್ಯಾಯಾಂಗದ ಘನತೆ ಮೇಲೆ ದಾಳಿ ನಡೆಸಲಾಗುತ್ತಿದೆ.</p>.<p>* ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಪಾತಿ ತೀರ್ಪು ಪಡೆಯಲು ಬಾದಾಮಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಪ್ರಭಾವ ಬೀರಿದ್ದರು ಎಂಬ ಆರೋಪದ ಕುರಿತಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಹೈಕೋರ್ಟ ಆದೇಶಿಸಿದೆ.</p>.<p>ಈ ಕುರಿತಂತೆ ಬಿಜೆಪಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸಲ್ಲಿಸಿರುವ ರಿಟ್ ಅರ್ಜಿಯನ್ನು ರಜಾಕಾಲದ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್ ವಿಚಾರಣೆ ನಡೆಸಿದರು.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕಾರದಲ್ಲಿ ಟಿ.ವಿ.ಚಾನೆಲ್, ಸುದ್ದಿ ಪತ್ರಿಕೆ, ಡಿಜಿಟಲ್ ಮೀಡಿಯಾ, ರೇಡಿಯೋ, ಮನರಂಜನಾ ಚಾನೆಲ್ಗಳು, ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಪ್ರಕಟಿಸಬಾರದು’ ಎಂದು ನಿರ್ಬಂಧ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.</p>.<p>‘ಯಾವುದೇ ಅಭ್ಯರ್ಥಿ ವಿರುದ್ಧ ವೈಯಕ್ತಿಕ ಘನತೆಗೆ ಧಕ್ಕೆ ಉಂಟು ಮಾಡುವ ಸುದ್ದಿಯನ್ನು ಯಾವುದೇ ಟಿ.ವಿ.ಚಾನೆಲ್, ಪತ್ರಿಕೆ, ಸೋಷಿಯಲ್ ಮೀಡಿಯಾ, ರೇಡಿಯೋ, ವೆಬ್ ಪೋರ್ಟಲ್ ಗಳಲ್ಲಿ ಪ್ರಕಟಿಸುವಂತಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶವನ್ನು ಈ ಕೂಡಲೇ ಎಲ್ಲ ಮಾಧ್ಯಮಗಳಿಗೆ ಇಮೇಲ್ ಮಖಾಂತರ ತಲುಪಿಸುವಂತೆಯೂ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶಿಸಲಾಗಿದೆ.</p>.<p><strong>ಅರ್ಜಿದಾರರ ಆಕ್ಷೇಪಗಳು ಏನು?:</strong></p>.<p>* ಆಧಾರರಹಿತ ಸುಳ್ಳು ಸುದ್ದಿ ಪ್ರಕಟಿಸಿದ್ದಾರೆ.</p>.<p>* ತನಿಖೆ, ವಿಚಾರಣೆ ಅಥವಾ ಕೋರ್ಟ್ ಆದೇಶಗಳಿಲ್ಲದೆ ದುರುದ್ದೇಶಪೂರ್ವಕವಾಗಿ ಪದೇ ಪದೇ ಬಿತ್ತರಿಸುತ್ತಿದ್ದಾರೆ.</p>.<p>* ಅರ್ಜಿದಾರರ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಪಕ್ಷದ ಘನತೆ ಹಾಳು ಮಾಡಲು ಯತ್ನಿಸುತ್ತಿದ್ದಾರೆ.<br /> ಆಧಾರ ರಹಿತ ಸುದ್ದಿ ಪ್ರಸಾರ ಮಾಡುತ್ತಿದ್ದಾರೆ.</p>.<p>* ಸುದ್ದಿ ಮಾಧ್ಯಮಗಳ ಮೇಲೆ ಮುಖ್ಯ ಚುನಾವಣಾ ಅಧಿಕಾರಿ ಕ್ರಮ ಕೈಗೊಳ್ಳುತ್ತಿಲ್ಲ.</p>.<p>* ಮಾಧ್ಯಮಗಳ ಮೇಲೆ ಪರಿಣಾಮಕಾರಿ ನಿಯಂತ್ರಣ ಇಲ್ಲವಾಗಿದೆ.</p>.<p>* ಇದರ ಹಿಂದೆ ಕೆಲವು ಹಿತಾಸಕ್ತಿಗಳ ಕೈವಾಡ ಇದೆ. ನಮ್ಮ ಅಭ್ಯರ್ಥಿ ರಾಮುಲುಗೆ ಮುಜುಗರ ಉಂಟು ಮಾಡಬೇಕು ಎಂಬುದೇ ಮಾಧ್ಯಮಗಳ ಉದ್ದೇಶವಾಗಿದೆ.</p>.<p>* ಇವರು ನಿವೃತ್ತ ಸಿಜೆಐ ವಿರುದ್ಧ ಆರೋಪ ಮಾಡುತ್ತಿದ್ದು ಇದರಿಂದ ನ್ಯಾಯಾಂಗದ ಘನತೆ ಮೇಲೆ ದಾಳಿ ನಡೆಸಲಾಗುತ್ತಿದೆ.</p>.<p>* ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>